ಬೆಳಗಾವಿ: ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತಾಲ್ಲೂಕಿನ ವಂಟಮೂರಿ ಘಾಟ್ನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಉತ್ತರಪ್ರದೇಶದ ನೀರಜ ಬಲ್ಲೂರ ಹಾಗೂ ಟ್ರಕ್ ಚಾಲಕ ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಮೃತ ವ್ಯಕ್ತಿಗಳು.
ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.