ಭಾರತದ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಅಡ್ಮಿರಲ್ ಹರಿ ಕುಮಾರ್ ತಮ್ಮ ತಾಯಿಯ ಪಾದ ಮುಟ್ಟಿ ನಮಸ್ಕರಿಸಿದ್ದು, ಭಾರತೀಯರ ಗಮನ ಸೆಳೆದಿದೆ.
ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಬಗ್ಗೆ ನೀವು ತಿಳಿಯಲೇಬೇಕಾದ ಅಂಶಗಳಿವು.
ಸಂಯೋಜಿತ ರಕ್ಷಣಾ ಸಿಬ್ಬಂದಿಗಳ ಪ್ರದಾನ ಕಚೇರಿಯ ಭಾಗವಾಗಿ ಥಿಯೇಟರ್ ಕಮಾಂಡ್ ಗಳನ್ನು ಪ್ರಾರಂಭಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.ಅಡ್ಮಿರಲ್ ಹರಿಕುಮಾರ್ ಅವರು ಸುದೀರ್ಘ 39 ವರ್ಷಗಳ ಕಾಲ ನೌಕಾಪಡೆಯ ವಿವಿಧ ಕಮಾಂಡ್, ಸ್ಟಾಫ್ ಮತ್ತು ನೇಮಕ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಐಎನ್ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್ಎಸ್ ಕೋರಾ ಮತ್ತು ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಐಎನ್ಎಸ್ ರಣವೀರ್ ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ ಎಸ್ ವಿರಾಟ್ಗೆ ಕಮಾಂಡರ್ ಆಗಿದ್ದರು.ಏ.12 1962ರಲ್ಲಿ ಆರ್. ಹರಿಕುಮಾರ್ ಜನಿಸಿದರು. ಜ.1 1983ರಲ್ಲಿ ನೌಕಾ ಪಡೆಗೆ ಸೇರ್ಪಡೆಗೊಂಡರು.
ವಿದ್ಯಾಭ್ಯಾಸ: ಯುಎಸ್ ನೇವಲ್ ವಾರ್ ಕಾಲೇಜ್, ಆರ್ಮಿ ವಾರ್ ಕಾಲೇಜ್, Mhow ಮತ್ತು ಯುಕೆಯ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್ನಲ್ಲಿ ಅಧ್ಯಯನ ಮಾಡಿದ್ದಾರೆ.ಸಾಧನೆ: ಅಡ್ಮಿರಲ್ ಕುಮಾರ್ ಅವರಿಗೆ ಅತಿ ವಿಶಿಷ್ಟ ಸೇವಾ ಪದಕ (AVSM), ವಿಶಿಷ್ಟ ಸೇವಾ ಪದಕ (VSM) ಪಡೆದಿದ್ದಾರೆ. ನ.23 2021ರಂದು ರಾಷ್ಟ್ರಪತಿ ಕೋವಿಂದ್ ಅವರಿಂದ ಪರಮ ವಿಶಿಷ್ಟ ಸೇವಾ ಪದಕ (PVSM) ಪಡೆದಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…