News Karnataka Kannada
Tuesday, April 30 2024
ದೇಶ

ಭಾರತ ಮೂಲಭೂತ ಸೌಕರ್ಯ ಯೋಜನೆಗಳನ್ನು ಮುಂದುವರಿಸಲಿ ; ತಾಲಿಬಾನ್‌ ನಾಯಕ

Talibans Rule
Photo Credit :

ಕಾಬೂಲ್ ;ಯಾವುದೇ ದೇಶದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುವುದಿಲ್ಲ ಎಂದಿರುವ ತಾಲಿಬಾನ್ ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ತಾಲಿಬಾನ್ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.
ಮಂಗಳವಾರ ತಡರಾತ್ರಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸುಹೈಲ್ ಶಹೀನ್, ಯಾರ ವಿರುದ್ಧವೂ ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಯಾವುದೇ ದೇಶಕ್ಕೆ ನಾವು ಬಿಡುವುದಿಲ್ಲ. ಇದು ಸ್ಪಷ್ಟ. ಅಫ್ಘಾನಿಸ್ತಾನದಲ್ಲಿ ಭಾರತ ಹಲವು ಯೋಜನೆಗಳನ್ನು, ನಿರ್ಮಾಣಗಳನ್ನು ಮತ್ತು ಮೂಲಭೂತ ಸೌಕರ್ಯ ಯೋಜನೆಗಳನ್ನು ಮಾಡಿದೆ. ಭಾರತ ಬಯಸುವುದಾದರೆ ಅಪೂರ್ಣಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ, ಏಕೆಂದರೆ ಯೋಜನೆಗಳು ಜನರ ಪರವಾಗಿದೆ ಎಂದು ಹೇಳಿದ್ದಾರೆ.
ಹಿಂದಿನ ಸರ್ಕಾರದ ಜತೆ ಕೆಲಸ ಮಾಡಿದವರ ಮತ್ತು ವಿದೇಶಿ ಸರ್ಕಾರಗಳು ಅಥವಾ ಪಡೆಗಳ ಜತೆ ಕೆಲಸ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳುವುದಿಲ್ಲ, ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು. ನಾವು ಅಫ್ಗನ್‌ ಜನರಿಗೆ ಸಂಪೂರ್ಣವಾಗಿ ಕ್ಷಮಾದಾನ ನೀಡಿದ್ದೇವೆ, ಸರ್ಕಾರ ರಚನೆಯ ಕುರಿತು ಮಾತುಕತೆಗಳು ನಡೆಯುತ್ತಿದ್ದು ಇಸ್ಲಾಮಿಕ್‌ ಸರ್ಕಾರ ರಚನೆಯಾಗಲಿದೆ. ಇಲ್ಲಿ ಖಾಸಗಿ ಮಾಧ್ಯಮಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು, ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.
ಈ ಯುದ್ಧಪೀಡಿತ ಅಫ್ಘಾನಿಸ್ತಾನದಲ್ಲಿ ಭಾರತ ಹೂಡಿಕೆ ಮಾಡಿರುವ ಮೊತ್ತ 3 ಬಿಲಿಯನ್ ಡಾಲರ್. ಶಟೂಟ್ ಅಣೆಕಟ್ಟು, ಸಲ್ಮಾ ಅಣೆಕಟ್ಟು, ಅಫ್ಘಾನಿಸ್ತಾನದ ಸಂಸತ್ತು ಮತ್ತು ಹಲವು ರಚನಾತ್ಮಕ ರಸ್ತೆಗಳ ನಿರ್ಮಾಣಕ್ಕೆ ಅಫ್ಘಾನಿಸ್ತಾನ ಭಾರತದ ನೆರವನ್ನು ಪಡೆದಿದೆ. ಈ ಯೋಜನೆಗಳು ಮುಗಿದ ಬಳಿಕ ಇದರಲ್ಲಿ ಭಾರತದ ಪಾತ್ರವೇನೂ ಇರುವುದಿಲ್ಲ, ನಂತರ ಅದನ್ನು ಕಾಪಾಡಿಕೊಳ್ಳುವುದು ಅಫ್ಘಾನಿಸ್ತಾನಕ್ಕೆ ಬಿಟ್ಟ ವಿಚಾರ ಎಂದು ಕಳೆದ ವಾರ ವಿದೇಶಾಂಗ ಸಚಿವಾಲಯ ಹೇಳಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು