ಕಾನ್ಪುರ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ಗುರುವಾರ ನಡೆದಿದೆ.
ಘಟನೆಯಲ್ಲಿ ಮಹಿಳೆ, ಆಕೆ ಮಗ ಹಾಗೂ ಪುತ್ರಿ ಸಾವನ್ನಪ್ಪಿರುವುದಾಗಿ ಪೂರ್ವ ಕಾನ್ಪುರದ ಡಿಸಿಪಿ ಅನೂಪ್ ಸಿಂಗ್ ಮಾಹಿತಿ ನೀಡಿದರು.
ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಿಗ್ಗೆ 6-24ರ ಸುಮಾರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.
ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿಯ ಕಾರ್ಯಾಲಯ ತಿಳಿಸಿದೆ.