ಪಾಟ್ನಾ: ರಾಖಿ ಹಬ್ಬದ ನಿಮಿತ್ತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮರಗಳಿಗೆ ರಾಖಿ ಕಟ್ಟಿ, ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ಬಿಹಾರದಲ್ಲಿ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ 2021ರಿಂದಲೂ ರಕ್ಷಾ ಬಂಧನ್ ಹಬ್ಬವನ್ನು ‘ವೃಕ್ಷ ರಕ್ಷಾ ದಿವಸ್ ‘ ಆಗಿ ಎನ್ ಡಿಎ ನೇತೃತ್ವದ ಬಿಹಾರ ಸರ್ಕಾರ ಆಚರಿಸಿಕೊಂಡು ಬಂದಿದ್ದು, ಜನರು ಸಸಿಗಳನ್ನು ನೆಟ್ಟು, ಅವುಗಳನ್ನು ಕಾಪಾಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದು ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಜನರನ್ನು ಕಾಪಾಡುವಂತೆ ಮರಗಳನ್ನು ರಕ್ಷಿಸಬೇಕಾಗಿದೆ. ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಜಲ ಜೀವನ್ ಹರಿಯಾಲಿ ಮಿಷನ್ ಅಡಿಯಲ್ಲಿ ರಾಜ್ಯ ಸರ್ಕಾರ ಸಸಿಗಳನ್ನು ನೆಡುವತ್ತಾ ಗಮನ ಕೇಂದ್ರೀಕರಿಸಿದೆ. ಮುಂದಿನ ಪೀಳಿಗೆಯು ಇದೀಗ ಪರಿಸರ ಸಂರಕ್ಷಣೆಯನ್ನು ಅರಿಯಬೇಕಾಗಿದೆ ಎಂದು ಅವರು ಹೇಳಿದರು.