ದೆಹಲಿ : ಮಾಜಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ.
ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಟ್ವೀಟ್ ಮಾಡಿದ್ದು, ಹಲವು ದಿನಗಳಿಂದ ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ನಮ್ಮನ್ನೆಲ್ಲ ಅವರು ಅಗಲಿದರು ಎಂದು ಕುಶನ್ ಹೇಳಿದ್ದಾರೆ.
ಚಂದನ್ ಮಿತ್ರಾ ದೆಹಲಿಯ ‘ದಿ ಪಯೋನೀರ್’ ಪತ್ರಿಕೆಯ ಸಂಪಾದಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಎರಡು ಬಾರಿ ರಾಜ್ಯಸಭೆಯ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಚಂದನ್ ಮಿತ್ರಾ ಅವರ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಚಂದನ್ ಮಿತ್ರಾ ಅವರು ತಮ್ಮ ಬುದ್ಧಿಶಕ್ತಿ ಹಾಗೂ ಒಳನೋಟಗಳಿಂದ ನೆನಪಿನಲ್ಲಿ ಉಳಿಯುತ್ತಾರೆ. ಅವರು ಮಾಧ್ಯಮ ಮತ್ತು ರಾಜಕೀಯ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ