ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್ ಎಚ್ ಆರ್ ಸಿ) 28ನೇ ಸಂಸ್ಥಾಪನಾ ದಿನದ ಅಂಗವಾಗಿ ಮಾತನಾಡಿದ ಪ್ರಧಾನಿ ಮೋದಿ, ಮಾನವ ಹಕ್ಕುಗಳ ವಿಚಾರ ಬಂದಾಗ ತಮ್ಮ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ನೋಡುವವರು ಮಾನವ ಹಕ್ಕುಗಳನ್ನು ವಿಭಿನ್ನವಾಗಿ ನೋಡುತ್ತಾರೆ ಎಂದರು.
ಮಾನವ ಹಕ್ಕುಗಳ ಉಲ್ಲಂಘನೆಯ ಹೆಸರಿನಲ್ಲಿ ಕೆಲವರು ದೇಶದ ಪ್ರತಿಷ್ಠೆಯನ್ನು ಕುಗ್ಗಿಸಲು ಪ್ರಯತ್ನಿಸುತ್ತಾರೆ, ಜನರು ಅಂಥವರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಹ ಹೇಳಿದರು.
ಇಲ್ಲಿ ಪ್ರಧಾನಿ ಮೋದಿಯವರು ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಹೆಸರಿಸದಿದ್ದರೂ, ಆಡಳಿತಾರೂಢ ಬಿಜೆಪಿ ಮಾನವ ಹಕ್ಕುಗಳ ಸಂಘಟನೆಯ ಒಂದು ಗುಂಪನ್ನು ಟೀಕಿಸುತ್ತಾ ಬಂದಿದೆ. ಮಾನವ ಸಂಪನ್ಮೂಲ ಉಲ್ಲಂಘನೆಯ ಪ್ರಕರಣಗಳನ್ನು ಆಯ್ದವಾಗಿ ಮತ್ತು ಏಕಪಕ್ಷೀಯವಾಗಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಬರುತ್ತಿರುವ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸಂಘನೆಗಳು ಕೂಡ ಸೇರಿವೆ.
ತಮ್ಮ ಭಾಷಣದಲ್ಲಿ ಪ್ರಧಾನ ಮಂತ್ರಿಗಳು, ಬಡವರಿಗೆ ಶೌಚಾಲಯ, ಅಡುಗೆ ಅನಿಲ, ವಿದ್ಯುತ್ ಮತ್ತು ವಸತಿಯಂತಹ ಮೂಲಭೂತ ಅಗತ್ಯಗಳನ್ನು ತಲುಪಿಸಲು ತಮ್ಮ ಸರ್ಕಾರ ತೆಗೆದುಕೊಂಡ ಹಲವಾರು ಕ್ರಮಗಳನ್ನು ಉಲ್ಲೇಖಿಸಿದರು.ಇದು ಬಡ ಮತ್ತು ನಿರ್ಗತಿಕರಲ್ಲಿ ಆಕಾಂಕ್ಷೆಗಳನ್ನು ಹುಟ್ಟುಹಾಕುವುದಲ್ಲದೆ ಮತ್ತು ಅವರ ಹಕ್ಕುಗಳ ಬಗ್ಗೆ ಹೆಚ್ಚು ಅರಿವು ಮೂಡಿಸುತ್ತದೆ ಎಂದು ಹೇಳಿದರು.
ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡುವ ಮೂಲಕ ತಮ್ಮ ಸರ್ಕಾರ ಮುಸಲ್ಮಾನ ಮಹಿಳೆಯರಿಗೆ ಹೊಸ ಹಕ್ಕುಗಳನ್ನು ನೀಡಿದೆ ಎಂದು ಪ್ರಧಾನಿ ಹೇಳಿದರು. ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮತ್ತು ಅತ್ಯಾಚಾರದಂತಹ ಪ್ರಕರಣಗಳಿಗೆ ಹೆಚ್ಚು ಕಠಿಣ ಕಾನೂನು ಕ್ರಮಗಳನ್ನು ತರುವ ಮೂಲಕ ಮಹಿಳಾ ಸಬಲೀಕರಣಗೊಳಿಸಬಹುದು ಎಂದಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಕಾಯಿದೆ, 1993 ರ ಅಡಿಯಲ್ಲಿ, ಅಕ್ಟೋಬರ್ 12, 1993 ರಂದು ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಗಾಗಿ ಆಯೋಗವನ್ನು ಸ್ಥಾಪಿಸಲಾಯಿತು. ಎನ್ಎಚ್ಆರ್ಸಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಗುರುತಿಸುತ್ತದೆ, ವಿಚಾರಣೆಗಳನ್ನು ನಡೆಸುತ್ತದೆ ಮತ್ತು ತಪ್ಪಿತಸ್ಥ ಸಾರ್ವಜನಿಕ ಸೇವಕರ ವಿರುದ್ಧ ಪರಿಹಾರ ಮತ್ತು ಕಾನೂನು ಕ್ರಮಗಳ ಜೊತೆಗೆ ಸಾರ್ವಜನಿಕ ಅಧಿಕಾರಿಗಳಿಂದ ಸಂತ್ರಸ್ತರಿಗೆ ಪರಿಹಾರವನ್ನು ಶಿಫಾರಸು ಮಾಡುತ್ತದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…