Categories: ದೇಶ

ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಯಾಕೆ ಇಸ್ಲಾಂ ಗೆ ಮತಾಂತರವಾಗಬೇಕು ? ಅಮೀರ್​​ಗೆ ಕಂಗನಾ ಪ್ರಶ್ನೆ

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ.
ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಕಂಗನಾ ರಣಾವತ್‍ರವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ, ಪಂಜಾಬ್‍ನ ಹಲವು ಕುಟುಂಬಗಳಲ್ಲಿ ಒಬ್ಬ ಮಗನನ್ನು ಸಿಖ್, ಮತ್ತೊಬ್ಬ ಮಗನನ್ನು ಹಿಂದೂ ಆಗಿ ಬೆಳೆಸುತ್ತಾರೆ. ಆದರೆ ಈ ಪದ್ದತಿ ಹಿಂದೂ ಹಾಗೂ ಮುಸ್ಲಿಂ ಅಥವಾ ಸಿಖ್ ಹಾಗೂ ಮುಸ್ಲಿಂ, ಅಥವಾ ಮುಸ್ಲಿಮರನ್ನು ಮದುವೆಯಾದ ಯಾರಲ್ಲೂ ಈ ಪದ್ಧತಿ ಕಾಣಿಸುವುದಿಲ್ಲ ಯಾಕೆ? ಎಂದಿದ್ದಾರೆ.
ಅಮೀರ್ ಖಾನ್ ಸರ್ ಅವರು ಎರಡನೇ ವಿಚ್ಛೇದನಾ ಪಡೆಯುತ್ತಿರುವ ಬಗ್ಗೆ ಆಶ್ಚರ್ಯ ಪಡೆಯುತ್ತೇನೆ. ಆದರೆ ಮಕ್ಕಳು ಮಾತ್ರ ಏಕೆ ಮುಸ್ಲಿಂ ಆಗಿರಬೇಕು. ಏಕೆ ಮಹಿಳೆಯರು ಹಿಂದೂ ಆಗಿ ಮುಂದುವರೆಯಬಾರದು. ಬದಲಾಗುತ್ತಿರುವ ಸಮಯದೊಂದಿಗೆ ನಾವು ಇದನ್ನು ಬದಲಿಸಬೇಕು. ಒಂದೇ ಕುಟುಂಬದಲ್ಲಿ ಹಿಂದೂ, ಸಿಖ್, ಬೌದ್ಧರು, ಜೈನರು ಜೊತೆಯಾಗಿರಲು ಸಾಧ್ಯವಿರುವಾಗ ಮುಸ್ಲಿಮರಿಗೆ ಮಾತ್ರ ಯಾಕೆ ಸಾಧ್ಯವಿಲ್ಲ? ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಬರೆದುಕೊಳ್ಳುವ ಮೂಲಕ ಕಿಡಿಕಾರಿದ್ದಾರೆ. ಸದ್ಯ ಕಂಗನಾರವರ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಮೀರ್ ಖಾನ್‍ರವರು ಇದಕ್ಕೆ ಏನು ಉತ್ತರ ನೀಡುತ್ತಾರೆ ಎಂದು ಕಾದು ನೋಡಬೇಕಾಗಿದೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago