ಶಿಲ್ಲಾಂಗ್: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಖಾಸಗಿ ನಿವಾಸಕ್ಕೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇನ್ನೊಂದೆಡೆ, 2018ರಲ್ಲಿ ಶರಣಾಗಿದ್ದ ಉಗ್ರನೊಬ್ಬನ ಹತ್ಯೆ ಹಿನ್ನೆಲೆಯಲ್ಲಿ ಶಿಲ್ಲಾಂಗ್ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಗೃಹ ಸಚಿವ ಲಹ್ಕ್ಮೆನ್ ರಿಂಬುಯಿ ರಾಜೀನಾಮೆ ನೀಡಿದ್ದಾ
ವಾಹನಗಳಲ್ಲಿ ಬಂದಿರುವ ದಾಳಿಕೋರರು ಪೆಟ್ರೋಲ್ ತುಂಬಿದ್ದ ಎರಡು ಬಾಟಲಿಗಳನ್ನು ಶಿಲ್ಲಾಂಗ್ನ ಮೂರನೇ ಮೈಲಿಯಲ್ಲಿರುವ ಸಂಗ್ಮಾ ಅವರ ಖಾಸಗಿ ನಿವಾಸದ ಆವರಣಕ್ಕೆ ಎಸೆದು ಹೋಗಿದ್ದಾರೆ. ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಮೊದಲ ಬಾಟಲಿಯನ್ನು ಮನೆಯ ಮುಂಭಾಗಕ್ಕೆ ಎಸೆಯಲಾಗಿದ್ದು, ಎರಡನೆ ಬಾಟಲಿಯನ್ನು ಮನೆಯ ಹಿಂಭಾಗದಲ್ಲಿ ಹಾಕಲಾಗಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ರಾಜಧಾನಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಘರ್ಷಣೆ, ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿಲ್ಲಾಂಗ್ನಲ್ಲಿ ಕರ್ಫ್ಯೂ ವಿಧಿಸಿದೆ. ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಿದೆ.
ಗೃಹ ಸಚಿವ ರಾಜೀನಾಮೆ: ಮಾಜಿ ಉಗ್ರನ ಮೇಲೆ ಗುಂಡು ಹಾರಿಸಿದ್ದಕ್ಕಾಗಿ ಶಿಲ್ಲಾಂಗ್ನಲ್ಲಿ ಹಿಂಸಾಚಾರಗಳು ಸಂಭವಿಸಿವೆ. ಹೀಗಾಗಿ ಮೇಘಾಲಯದ ಗೃಹ ಸಚಿವ ಲಹ್ಕ್ಮೆನ್ ರಿಂಬುಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.