ಶಿಲ್ಲಾಂಗ್: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಖಾಸಗಿ ನಿವಾಸಕ್ಕೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇನ್ನೊಂದೆಡೆ, 2018ರಲ್ಲಿ ಶರಣಾಗಿದ್ದ ಉಗ್ರನೊಬ್ಬನ ಹತ್ಯೆ ಹಿನ್ನೆಲೆಯಲ್ಲಿ ಶಿಲ್ಲಾಂಗ್ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಗೃಹ ಸಚಿವ ಲಹ್ಕ್ಮೆನ್ ರಿಂಬುಯಿ ರಾಜೀನಾಮೆ ನೀಡಿದ್ದಾ
ವಾಹನಗಳಲ್ಲಿ ಬಂದಿರುವ ದಾಳಿಕೋರರು ಪೆಟ್ರೋಲ್ ತುಂಬಿದ್ದ ಎರಡು ಬಾಟಲಿಗಳನ್ನು ಶಿಲ್ಲಾಂಗ್ನ ಮೂರನೇ ಮೈಲಿಯಲ್ಲಿರುವ ಸಂಗ್ಮಾ ಅವರ ಖಾಸಗಿ ನಿವಾಸದ ಆವರಣಕ್ಕೆ ಎಸೆದು ಹೋಗಿದ್ದಾರೆ. ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಮೊದಲ ಬಾಟಲಿಯನ್ನು ಮನೆಯ ಮುಂಭಾಗಕ್ಕೆ ಎಸೆಯಲಾಗಿದ್ದು, ಎರಡನೆ ಬಾಟಲಿಯನ್ನು ಮನೆಯ ಹಿಂಭಾಗದಲ್ಲಿ ಹಾಕಲಾಗಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ರಾಜಧಾನಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಘರ್ಷಣೆ, ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿಲ್ಲಾಂಗ್ನಲ್ಲಿ ಕರ್ಫ್ಯೂ ವಿಧಿಸಿದೆ. ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಿದೆ.
ಗೃಹ ಸಚಿವ ರಾಜೀನಾಮೆ: ಮಾಜಿ ಉಗ್ರನ ಮೇಲೆ ಗುಂಡು ಹಾರಿಸಿದ್ದಕ್ಕಾಗಿ ಶಿಲ್ಲಾಂಗ್ನಲ್ಲಿ ಹಿಂಸಾಚಾರಗಳು ಸಂಭವಿಸಿವೆ. ಹೀಗಾಗಿ ಮೇಘಾಲಯದ ಗೃಹ ಸಚಿವ ಲಹ್ಕ್ಮೆನ್ ರಿಂಬುಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…