News Karnataka Kannada
Sunday, April 28 2024
ದೇಶ

ಯುದ್ಧನೌಕೆ ರಣವಿಜಯ್​​ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

Fire Iran 13072021
Photo Credit :

ಭಾರತೀಯ ನೌಕಾಪಡೆಯ ನೌಕೆ ಐಎನ್​ಎಸ್​ ರಣವಿಜಯ್ ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನೌಕಾಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.

ನೌಕಾಪಡೆಯ ತಂಡಗಳು ಬೆಂಕಿಯನ್ನು ಹತೋಟಿಗೆ ತಂದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲರನ್ನೂ ನೌಕಾಪಡೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ನೇವಿ ವಕ್ತಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ನೌಕಾ ವ್ಯಾಯಾಮದಲ್ಲಿ ಪಾಲ್ಗೊಂಡಿದ್ದ ಈ ನೌಕೆಯನ್ನು ವಿಶಾಖಪಟ್ಟಣಂ ನೇವಲ್ ಹಾರ್ಬರ್​ನಲ್ಲಿ ನಿಲ್ಲಿಸಲಾಗಿತ್ತು. ವ್ಯಾಯಾಮದ ಸಂದರ್ಭದಲ್ಲಿ ಯಾವುದೇ ತೊಂದರೆಯೂ ಆಗಿರಲಿಲ್ಲ ಈಗ ಅಗ್ನಿ ಅವಘಡ ನಡೆದಿದ್ದು, ಪ್ರಕರಣದ ತನಿಖೆಗೆ ತನಿಖಾ ಮಂಡಳಿಯನ್ನು ಸ್ಥಾಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು