ಭಾರತೀಯ ನೌಕಾಪಡೆಯ ನೌಕೆ ಐಎನ್ಎಸ್ ರಣವಿಜಯ್ ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನೌಕಾಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.
ನೌಕಾಪಡೆಯ ತಂಡಗಳು ಬೆಂಕಿಯನ್ನು ಹತೋಟಿಗೆ ತಂದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲರನ್ನೂ ನೌಕಾಪಡೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ನೇವಿ ವಕ್ತಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ನೌಕಾ ವ್ಯಾಯಾಮದಲ್ಲಿ ಪಾಲ್ಗೊಂಡಿದ್ದ ಈ ನೌಕೆಯನ್ನು ವಿಶಾಖಪಟ್ಟಣಂ ನೇವಲ್ ಹಾರ್ಬರ್ನಲ್ಲಿ ನಿಲ್ಲಿಸಲಾಗಿತ್ತು. ವ್ಯಾಯಾಮದ ಸಂದರ್ಭದಲ್ಲಿ ಯಾವುದೇ ತೊಂದರೆಯೂ ಆಗಿರಲಿಲ್ಲ ಈಗ ಅಗ್ನಿ ಅವಘಡ ನಡೆದಿದ್ದು, ಪ್ರಕರಣದ ತನಿಖೆಗೆ ತನಿಖಾ ಮಂಡಳಿಯನ್ನು ಸ್ಥಾಪಿಸಲಾಗಿದೆ.