News Karnataka Kannada
Saturday, May 18 2024
ದೇಶ

ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಇನ್ನು ಮುಂದೆ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಶ್ತಿ

Photo Credit :

ನವದೆಹಲಿ : ದೇಶದ ಕ್ರೀಡಾಪಟುಗಳಿಗೆ ನೀಡಲಾಗುವ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿಯನ್ನು ಹಾಕಿ ದಿಗ್ಗಜರಾದ ಧ್ಯಾನ್ ಚಂದ್ ಸ್ಮರಣಾರ್ಥ ಮೇಜರ್ ಧ್ಯಾನ್ ಚಂದ್ ಖೇಲ್‌ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ದೇಶಾದ್ಯಂತ ನಾಗರಿಕರ ಭಾವನೆಗಳನ್ನು ಗೌರವಿಸಿ ಈ ಮಹತ್ತರ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಖೇಲ್ ರತ್ನ ಪ್ರಶಸ್ತಿಯನ್ನು 1991-1992 ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಮೊದಲು ತನ್ನದಾಗಿಸಿಕೊಂಡವರು ಚೆಸ್ ದಂತಕತೆ ವಿಶ್ವನಾಥನ್ ಆನಂದ್. ಲಿಯಾಂಡರ್ ಪೇಸ್, ಸಚಿನ್ ತೆಂಡೂಲ್ಕರ್, ಧನರಾಜ್ ಪಿಳ್ಳೈ, ಪುಲ್ಲೇಲ ಗೋಪಿಚಂದ್, ಅಭಿನವ್ ಬಿಂದ್ರಾ, ಅಂಜು ಬಾಬಿ ಜಾರ್ಜ್, ಮೇರಿ ಕೋಮ್ ಮೊದಲಾದ ಶ್ರೇಷ್ಠ ಕ್ರೀಡಾಪಟುಗಳು ಈ ಪ್ರಶಸ್ತಿಯ ಹಿರಿಮೆಗೆ ಪಾತ್ರರಾಗಿದ್ದಾರೆ.
ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್‌ಚಂದ್ ಹೆಸರಿನಲ್ಲಿ ಮರುನಾಮಕರಣ ಮಾಡುವಂತೆ ಪ್ರಧಾನಿಯವರಿಗೆ ದೇಶಾದ್ಯಂತ ನಾಗರಿಕರು ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಗೌರವಿಸಿ ಹಾಗೂ ಅಭಿಮಾನಕ್ಕೆ ಮನ್ನಣೆ ನೀಡಿ ಖೇಲ್‌ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.
ಪ್ರಸ್ತುತ ಮರುನಾಮಕರಣಗೊಂಡಿರುವ ಧ್ಯಾನ್‌ಚಂದ್ ಖೇಲ್‌ ರತ್ನ ಪ್ರಶಸ್ತಿಯು 25 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದೆ. ಹಾಕಿ ಮಾಂತ್ರಿಕ ಎಂದೇ ಬಿರುದಾಂಕಿತರಾಗಿರುವ ಮೇಜರ್ ಧ್ಯಾನ್ ಚಂದ್ ಅಂತಾರಾಷ್ಟ್ರೀಯ ಹಾಕಿ ಪಂದ್ಯಾಟವನ್ನು 1926ರಿಂದ 1949ರವರೆಗೆ ಆಡಿದರು ಹಾಗೂ ತಮ್ಮ ವೃತ್ತಿಜೀವನದಲ್ಲಿ 400 ಗೋಲುಗಳನ್ನು ಗಳಿಸಿ ಭಾರತದ ಅಗ್ರಗಣ್ಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲಹಾಬಾದ್‌ನಲ್ಲಿ ಜನಿಸಿದ ಧ್ಯಾನ್‌ಚಂದ್ 1928, 1932 ಹಾಗೂ 1936ರ ಒಲಿಂಪಿಕ್ಸ್‌ ತಂಡದ ಭಾಗವಾಗಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು