ರಾಜ್ಯದ ವಿಶ್ವವಿದ್ಯಾನಿಲಯಗಳ ಘಟಿಕೋತ್ಸವದಲ್ಲಿ ಇನ್ನು ಮುಂದೆ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.
ಖಾದಿ ಸಂಸ್ಕೃತಿ ಬಿಂಬಿಸಲು ಹಾಗೂ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡಲು ಈ ನಿರ್ಧಾರಕ್ಕೆ ಬರಲಾಗಿದೆ.
ಖಾದಿ ದಿರಿಸು ಅಥವಾ ದೇಶಿ ಉಡುಪುಗಳನ್ನು ಬಳಸಬೇಕು ಎಂದು ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಸಲಹೆ ನೀಡಿದ್ದಾರೆ.
ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳದ್ದು. ಸಾಮಾಜಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಿ. ದೇಶಿ ಉಡುಪು ಬಳಸು ಮೂಲಕ ದೇಶದ ಉತ್ಪನ್ನಗಳಿಗೆ ಉತ್ತೇಜನ ನೀಡುವಂತಾಗಲಿ ಎಂದಿದ್ದಾರೆ.