Categories: ದೇಶ

ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಮತ್ತು ಬ್ಲಾಂಕೆಟ್ ಗೆಲ್ಲುವ ಅವಕಾಶ

ಇಂಪಾಲ್ : ಮಣಿಪುರದ ಇಪಾಲ್ ಪೂರ್ವ ಜಿಲ್ಲೆಯ ಜನರು ಕೋವಿಡ್-19 ಬೃಹತ್ ಲಸಿಕಾ ಶಿಬಿರದಲ್ಲಿ ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವ ಅವಕಾಶವಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಲಸಿಕೆ ನೀಡುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಕ್ಟೋಬರ್ 24, ಅಕ್ಟೋಬರ್ 31 ಮತ್ತು ನವೆಂಬರ್ 7 ರಂದು ಜಿಲ್ಲೆಯ ಮೂರು ಕೇಂದ್ರಗಳಲ್ಲಿ ‘ಲಸಿಕೆ ಪಡೆದು, ಬಹುಮಾನ ಗೆಲ್ಲಿರಿ’ ಘೋಷಣೆಯೊಂದಿಗೆ ಮೆಗಾ ಲಸಿಕೆ ನೀಡಿಕೆ ಕಮ್ ಬಂಪರ್ ಡ್ರಾ ಕಾರ್ಯಕ್ರಮವನ್ನು ಆಯೋಜಿಸಲು ಇಂಪಾಲದ ಪೂರ್ವ ಜಿಲ್ಲಾಡಳಿತ ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಜಿಲ್ಲಾಧಿಕಾರಿ ಟಿ.ಹೆಚ್. ಕಿರಣ್ ಕುಮಾರ್, ಮೂರು ಕೇಂದ್ರಗಳಲ್ಲಿ ಲಸಿಕೆ ಪಡೆದವರು, ಬಂಪರ್ ಡ್ರಾದಲ್ಲಿ ಪಾಲ್ಗೊಂಡು ಬಹುಮಾನ ಗೆಲಲ್ಲು ಅವಕಾಶವಿದೆ ಎಂದು ಹೇಳಿದ್ದಾರೆ. ಮೊದಲ ಬಹುಮಾನವಾಗಿ ದೊಡ್ಡ ಪರದೆಯ ಟಿವಿ ಸೆಟ್, ಎರಡನೇ ಬಹುಮಾನವಾಗಿ ಮೊಬೈಲ್ ಫೋನ್ ಹಾಗೂ ಮೂರನೇ ಬಹುಮಾನವಾಗಿ ಬ್ಲಾಂಕೆಟ್ ಮತ್ತಿತರ ಸಮಾಧಾನಕಾರ ಬಹುಮಾನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಮೊದಲ ಹಾಗೂ ಎರಡನೇ ಡೋಸ್ ಕೋವಿಡ್-19 ಲಸಿಕೆ ಪಡೆಯದ 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರು ಲಕ್ಕಿ ಡ್ರಾನಲ್ಲಿ ಪಾಲ್ಗೊಂಡು , ಬಹುಮಾನ ಗೆಲ್ಲಲು ಅರ್ಹರಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

Gayathri SG

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

9 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

29 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago