ನವದೆಹಲಿ: ಕೊರೊನಾ ಲಸಿಕೆ ಪಡೆದವರೆಲ್ಲರೂ ಬಾಹುಬಲಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಲೋಕಸಭಾ ಅಧಿವೇಶನ ಆರಂಭಕ್ಕೂ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು
ಅಧಿವೇಶನದಲ್ಲಿ ವಿಪಕ್ಷದ ನಾಯಕರು ಕಷ್ಟದ ಪ್ರಶ್ನೆಗಳನ್ನು ಕೇಳಲಿ. ಆದ್ರೆ ನಮಗೆ ಉತ್ತರ ನೀಡಲು ಅವಕಾಶ ನೀಡಬೇಕು. ಕಾರಣ ಸಾಮಾನ್ಯ ಜನರಿಗೂ ಸರ್ಕಾರದ ಧ್ವನಿ ತಲುಪಬೇಕಿದೆ.
ಬಹುತೇಕ ಎಲ್ಲರೂ ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಸದನದ ಸದಸ್ಯರು ಮತ್ತು ಇನ್ನುಳಿದ ಎಲ್ಲರೂ ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ಲಸಿಕೆ ನಿಮ್ಮ ‘ಬಾಹು’ (ತೋಳು)ಗಳ ಮೇಲೆ ಹಾಕಿರೋದರಿಂದ ನೀವೆಲ್ಲ ಬಾಹುಬಲಿಗಳು ಆಗುತ್ತೀರಿ. ಈಗಾಗಲೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಸುಮಾರು 40 ಕೋಟಿ ಬಾಹುಬಲಿಗಳು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.ಕೊರೊನಾ ಸೋಂಕು ಇಡೀ ವಿಶ್ವವನ್ನೇ ತಲ್ಲಣಗೊಳಿಸಿತು. ಕೊರೊನಾಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಗುಣಮಟ್ಟದ ಚರ್ಚೆ ನಡೆಯಲಿ ಎಂದು ಇಚ್ಛಿಸುತ್ತೇನೆ. ಕೊರೊನಾ ವಿಷಯದಲ್ಲಿ ವಿಪಕ್ಷಗಳು ನೀಡುವ ಸಲಹೆಯನ್ನು ಸ್ವೀಕರಿಸಿ ನಮ್ಮ ಮಹಾಮಾರಿ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ. ನಾನೇ ಸ್ವತಃ ಕೊರೊನಾಗೆ ಸಂಬಂಧಿಸಿದ ಮಾಹಿತಿ ನೀಡಲು ಇಷ್ಟಪಡುತ್ತೇನೆ. ಫ್ಲೋರ್ ಲೀಡರ್ ಜೊತೆ ಮಾತುಕತೆ ನಡೆಯಲಿದೆ. ಈಗಾಗಲೇ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ದೇಶದ ಜನತೆಯ ಪ್ರಶ್ನೆಗಳಿಗೆ ಉತ್ತರ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದರು.
ಲಸಿಕೆ ಪಡೆದವರೇ ಬಾಹುಬಲಿಗಳು ; ಮೋದಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.