News Karnataka Kannada
Monday, May 06 2024
ದೇಶ

ವರಿಷ್ಠ ಸಲಹೆ, ಸೂಚನೆಯಂತೆ ಮುಂದಿನ ನಿರ್ಧಾರ: ಬಸವರಾಜ ಬೊಮ್ಮಾಯಿ

Basavaraja Bommai
Photo Credit :

ನವದೆಹಲಿ: ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಲಹೆ, ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ನವದೆಹಲಿಗೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ಹೇಳಲು ಬಂದಿರುವ ಬಸವರಾಜ ಬೊಮ್ಮಾಯಿ ಕರ್ನಾಟಕ ಭವನ ಮುಂದೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಶುಕ್ರವಾರ ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ನಂತರ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಅದಕ್ಕೆ ಮುನ್ನ ರಾಜನಾಥ್ ಸಿಂಗ್ ಹಾಗೂ ನಂತರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಮಧ್ಯಾಹ್ನ 1 ಗಂಟೆಗೆ ರಾಜ್ಯದ ಸಂಸದರನ್ನು ಸಭೆ ಮತ್ತು ಭೋಜನಕ್ಕೆ ಆಹ್ವಾನಿಸಿದ್ದೇನೆ, ಇವತ್ತು ಇಲ್ಲಿಯೇ ಉಳಿದುಕೊಂಡು ನಾಳೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಸಚಿವ ಸಂಪುಟ ರಚನೆ ಸುಸೂತ್ರವಾಗಿ ನಡೆಯುತ್ತದೆ, ಯಾವುದೇ ಅಡ್ಡಿ-ಆತಂಕಗಳು ಬರದೆ ಉತ್ತಮವಾಗಿ ಪ್ರಕ್ರಿಯೆ ಸಾಗುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ಹಲವು ಆಕಾಂಕ್ಷಿಗಳು ಇರುತ್ತಾರೆ, ಪ್ರಾದೇಶಿಕ, ಸಮುದಾಯ ಪ್ರಾತಿನಿಧ್ಯ ನೋಡಿಕೊಂಡು ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು