News Karnataka Kannada
Sunday, May 05 2024
ದೇಶ

ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ: ಮುಖ್ಯಮಂತ್ರಿ ಬೊಮ್ಮಾಯಿ ಮನವಿ

Shirady 09092021
Photo Credit :

ನವದೆಹಲಿ: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ನಾಲ್ಕು ಪಥಗಳ ಹೆದ್ದಾರಿ ಕಾಮಗಾರಿ ಚುರುಕುಗೊಳಿಸಬೇಕು. ಚತುಷ್ಪಥ ನಿರ್ಮಾಣ ಪೂರ್ಣಗೊಳಿಸುವುದು ಆದ್ಯತೆಯಾಗಿದೆ. ಸುರಂಗ ಮಾರ್ಗ ನಿರ್ಮಿಸುವ ವಿಚಾರದಲ್ಲಿ ಕನ್ಸಲ್ಟಂಟ್‌ಗಳ ಜತೆ ಮಾತುಕತೆ ನಡೆದಿದೆ. ಅಲ್ಲದೆ, ರಾಜ್ಯದ ನಾಲ್ಕು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆಯೊಂದನ್ನು ನೀಡಿದ್ದೇವೆ ಎಂದರು.

ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ 0 ರಿಂದ 80 ಕಿ.ಮೀವರೆಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, 80 ನೇ ಕಿ.ಮೀ ನಿಂದ 168.90 ಕಿ.ಮೀ.ವರೆಗೆ ಅಭಿವೃದ್ಧಿ ಕಾರ್ಯವನ್ನು ಮುಂದುವರೆಸಲು ಗಡ್ಕರಿಯವರು ಒಪ್ಪಿಗೆ ನೀಡಿದ್ದಾರೆ. ಇವೆಲ್ಲವನ್ನೂ ಭಾರತ್‌ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು