ಶ್ರೀನಗರದ ಅಮಿರಾ ಕಾಡಲ್ ಸೇತುವೆಯ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರ ಗ್ರೆನೇಡ್ ದಾಳಿಗೆ ನಾಗರಿಕರೊಬ್ಬರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ನಾಗರಿಕರಾಗಿದ್ದಾರೆ ಎನ್ನಲಾಗ್ತಿದೆ.
ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಬಲಾವಾಲ್ ಮಾಹಿತಿ ನೀಡಿದ್ದು, 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ತಿಳಿಸಿದೆ.
ಸ್ಫೋಟದಲ್ಲಿ ಒಬ್ಬ ಪೊಲೀಸ್ ಮತ್ತು ಕೆಲವು ನಾಗರಿಕರಿಗ ಗಾಯಗಳಾಗಿವೆ ಎಂದು ಅವರು ಹೇಳಿದ್ದು, ಗಾಯಗೊಂಡವರನ್ನು ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆದೆ ದಾಖಲಿಸಲಾಗಿದೆ.ಎಲ್ಲಾ ಗಾಯಾಳುಗಳ ಗುರುತುಗಳು ಇನ್ನೂ ನಮಗೆ ಲಭ್ಯವಾಗಿಲ್ಲ ಎಂದಿದ್ದಾರೆ.
One grenade attack took place in busy market near Amira kadal bridge. In this terror act, one old man from nowhatta has succumbed to injuries while one girl is critical. In this attack, 24 other persons incl 23 civilians & 1 cop have received splinter injuries & are out of danger
— Srinagar Police (@SrinagarPolice) March 6, 2022