ಶ್ರೀನಗರದ ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ.
ಉಗ್ರರ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭ ಉಗ್ರರನ್ನು ಭಾರತೀಯ ಸೈನಿಕರು ಬೆನ್ನಟ್ಟಿದಾಗ ಉಗ್ರರು ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ.