News Karnataka Kannada
Monday, April 29 2024
ದೇಶ

ಸಂಸತ್ತು ಅಧಿವೇಶನ ಆರಂಭ: ವಿಪಕ್ಷಗಳಿಂದ ಗದ್ದಲ, ಕಲಾಪ ಮುಂದೂಡಿಕೆ

Lok Sabha 19072021
Photo Credit :

ನವದೆಹಲಿ: ಸಂಸತ್ತು ಮುಂಗಾರು ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಆರಂಭದ ಸಮಯದಲ್ಲೇ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಲೋಕಸಭೆ, ರಾಜ್ಯಸಭೆ ಕಲಾಪವನ್ನು ಮುಂದೂಡಲಾಗಿದೆ.

ಲೋಕಸಭಾ ಕಲಾಪ ಹಾಗೂ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸಂಸತ್ತಿನಲ್ಲಿ ವೈಎಸ್ಆರ್ ಸಿಪಿ ಮದ್ದಿಲ ಗುರುಮೂರ್ತಿ, ಬಿಜೆಪಿ ಮಂಗಳಾ ಸುರೇಶ್, ಐಯುಎಂಎಲ್ ಅಬ್ದುಸಮ್ಮಾದ್ ಸಮದಾನ್ ಮತ್ತು ಕಾಂಗ್ರೆಸ್ಸಿನ ವಿಜಯ್ ವಸಂತ್ ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಬಳಿಕ ನೂತನ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಸಚಿವರಾದ ಹಿನ್ನೆಲೆ ಸಂಸತ್ತಿನಲ್ಲಿ ಉತ್ಸಾಹ ಹೆಚ್ಚಾಗಿರುತ್ತದೆ ಎಂದು ನಾನು ಭಾವಿಸಿದ್ದೇನೆ. ಈ ಬಾರಿ ಕೃಷಿ ಮತ್ತು ಗ್ರಾಮೀಣ ಹಿನ್ನೆಲೆಯ ಒಬಿಸಿ ಸಮುದಾಯದ ನಮ್ಮ ಸಹೋದ್ಯೋಗಿಗಳಿಗೆ ಮಂತ್ರಿ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ನೂತನ ಸಚಿವರ ಕುರಿತು ಮಾತನಾಡುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿರೋಧ ಪಕ್ಷಗಳ ಈ ನಡೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಜನಾಥ್ ಸಿಂಗ್ ಅವರು ಮಾತನಾಡುತ್ತಿದ್ದಂತೆಯೇ ವಿಪಕ್ಷಗಳು ತೀವ್ರ ಗದ್ದಲವನ್ನುಂಟು ಮಾಡಿದರು. ಬಳಿಕ ಲೋಕಸಭಾ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಇನ್ನು ರಾಜ್ಯ ಸಭೆಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದ ಅಬ್ದುಲ್ ವಹಾಬ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕಲಾಪವನ್ನು ಮಧ್ಯಾಹ್ನ 12.24ಕ್ಕೆ ಮುಂದೂಡಲಾಯಿತು.

ಮಧ್ಯಾಹ್ನ 12.24ಕ್ಕೆ ಮರಳಿ ರಾಜ್ಯಸಭಾ ಕಲಾಪ ಆರಂಭವಾದ ಬಳಿಕ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲವನ್ನುಂಟು ಮಾಡಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು