ಜ.31 ರಂದು ಪ್ರಾರಂಭವಾಗುವ ಸಂಸತ್ ಬಜೆಟ್ ಅಧಿವೇಶನಕ್ಕೆ ಕೊರೋನಾ ಕರಿನೆರಳು ಬಿದ್ದಿದೆ. ಬಜೆಟ್ ಆರಂಭಕ್ಕೂ ಮುನ್ನ ಸದನದ ಕನಿಷ್ಠ 875 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ ಸಂಕೀರ್ಣದಲ್ಲಿ 2,847 ಪರೀಕ್ಷೆಗಳನ್ನು ನಡೆಸಿದ್ದು, ಇದರಲ್ಲಿ 875 ಮಂದಿಗೆ ಸೋಂಕು ದೃಢಪಟ್ಟಿದೆ.