ನವದೆಹಲಿ: ಕೇಂದ್ರದ ಮಾಜಿ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಗೌರವ ನಮನ ಸಲ್ಲಿಸಿದ್ದಾರೆ.
‘ಇಂದು ಸಹೋದರಿ ಸುಷ್ಮಾ ಸ್ವರಾಜ್ ಅವರ ಪುಣ್ಯಸ್ಮರಣೆ. ಅವರೊಬ್ಬ ಅತ್ಯುತ್ತಮ ಸಂಸದೀಯ ಪಟು ಮತ್ತು ಉತ್ತಮ ವಾಗ್ಮಿ. ಮಹಿಳೆಯರು ಮತ್ತು ದೀನ ದಲಿತರ ವರ್ಗದ ಸಬಲೀಕರಣಕ್ಕಾಗಿ ಹಗಲಿರುಳು ಸೇವೆ ಸಲ್ಲಿಸಿದ ವ್ಯಕ್ತಿ. ಅವರು ರಾಷ್ಟ್ರಕ್ಕೆ ಸಲ್ಲಿಸಿರುವ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ವೆಂಕಯ್ಯನಾಯ್ಡು ಟ್ವೀಟ್ ಮಾಡಿದ್ದಾರೆ.
‘ಎಲ್ಲ ಕ್ಷೇತ್ರಗಳ ಜನರ ಬಗ್ಗೆಯೂ ಸಹಾಬುಭೂತಿ ಹೊಂದಿದ್ದ, ದೇಶ ಸೇವೆಗೆ ಸಮರ್ಪಿಸಿಕೊಂಡಿದ್ದ ಧೀಮಂತ ನಾಯಕಿ ಸುಷ್ಮಾ ಸ್ವರಾಜ್. ಅವರ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ಹೇಳಿದ್ದಾರೆ.