News Karnataka Kannada
Monday, April 29 2024
ದೇಶ

ಸೇನೆಯ 6 ಮಂದಿ ಯೋಧರಿಗೆ ಶೌರ್ಯ ಚಕ್ರ ಪ್ರಶಸ್ತಿ

New Project 2021 08 14t103025.606
Photo Credit :
ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಭಾರತೀಯ ಸೇನೆಯ 6 ಯೋಧರಿಗೆ ಈ ಬಾರಿಯ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ.
ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹೋರಾಡಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದ ತಂಡದ ಭಾಗವಾಗಿದ್ದರು ಈ ಯೋಧರು.
ಮೇಜರ್ ಅರುಣ್ ಕುಮಾರ್ ಪಾಂಡೆ, ಮೇಜರ್ ರವಿ ಕುಮಾರ್ ಚೌಧರಿ, ಕ್ಯಾಪ್ಟನ್ ಅಶುತೋಷ್ ಕುಮಾರ್ (ಮರಣೋತ್ತರ) ಕ್ಯಾಪ್ಟನ್ ವಿಕಾಸ್ ಖತ್ರಿ, ರೈಫಲ್ ಮ್ಯಾನ್ ಮುಖೇಶ್ ಕುಮಾರ್ ಹಾಗೂ ಸಿಪಾಯಿ ನೀರಜ್ ಅಹ್ಲಾವತ್ ಅವರಿಗೆ ಶೌರ್ಯ ಚಕ್ರ ನೀಡಿ ಗೌರವಿಸಲಾಗುತ್ತಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ನಾಲ್ವರು ಸೇನಾಸ್ ಇಬ್ಬಂದಿಗಳಿಗೆ ಸೇನೆಯ ಪದಕ ದೊರೆತಿದ್ದರೆ, 116 ಮಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ದಿನ ಪದಕಗಳನ್ನು ಘೋಷಿಸಲಾಗಿದೆ. 2020 ರ ಜೂನ್ 09 ಹಾಗೂ 10 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗೆ ರಾಷ್ಟ್ರೀಯ ರೈಫಲ್ಸ್ ನ 44 ನೇ ಬೆಟಾಲಿಯನ್ ನ ಮೇಜರ್ ಪಾಂಡೇ ಅವರು ನೇತೃತ್ವ ವಹಿಸಿ ಇಬ್ಬರು ಕಟ್ಟರ್ ಉಗ್ರರನ್ನು ಹತ್ಯೆ ಮಾಡಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು