News Karnataka Kannada
Monday, April 29 2024
ದೇಶ

ಸ್ವಾತಂತ್ರ್ಯೋತ್ಸವಕ್ಕೆ ಕ್ಷಣ ಗಣನೆ ; ದೆಹಲಿಯಲ್ಲಿ ಬಿಗಿ ಭದ್ರತೆ

Red Fort
Photo Credit :

ನವದೆಹಲಿ, – ಭಯೋತ್ಪಾದನೆ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ದೇಶಾದ್ಯಂತ ಬಿಗಿ ರಕ್ಷಣಾ ವ್ಯವಸ್ಥೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಪೊಲೀಸ್ ಆಯುಕ್ತರು ನಿರಂತರವಾಗಿ ಸಭೆಗಳನ್ನು ನಡೆಸಿ ಸುರಕ್ಷಾತ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಈ ನಡುವೆ ಜಮ್ಮು-ಕಾಶ್ಮಿರದ ಗಡಿ ಭಾಗದಲ್ಲಿ ನೆರೆಯ ರಾಷ್ಟ್ರದಿಂದ ಡ್ರೋಣ್ ದಾಳಿ ನಡೆಸುವ ಪ್ರಯತ್ನಗಳು ನಡೆದಿದ್ದು, ಹಲವಾರು ಬಾರಿ ವಿಫಲಗೊಳಿಸಲಾಗಿದೆ. ಅದರ ಬೆನ್ನಲ್ಲೆ ದೇಶದ ನಾನಾ ಭಾಗಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದ್ದು, ಶಂಕಿತ ಭಯೋತ್ಪಾದಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.ಈ ನಡುವೆ ಐಸ್ಸಿಸ್ ಮತ್ತು ಕೆಲವು ನಿಷೇಧಿತ ಉಗ್ರ ಸಂಘಟನೆಗಳಿಗೆ ದೇಶಿಯ ಯುವಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅವರಿಂದ ಸ್ವತಂತ್ರ್ಯ ದಿನಾಚರಣೆಯ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಮಾಹಿತಿಗಳಿವೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲೆಡೆ ತಪಾಸಣಾ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ. ಡ್ರೋಣ್, ಲಘು ವಿಮಾನ, ಬಿಸಿಗಾಳಿಯ ಬಲೂನ್‍ಗಳು, ಪ್ಯಾರಚೂಟ್ ಬಳಕೆಗೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.
ಬಾಂಬ್ ನಿಷ್ಕ್ರೀಯ ದಳಗಳು, ಶ್ವಾನ ದಳಗಳು ಎಲ್ಲೆಡೆ ಶೋಧ ಕಾರ್ಯಚರಣೆ ನಡೆಸಿವೆ. ಗಡಿ ಭಾಗದಲ್ಲಿ ಕಟ್ಟೆಚರವಹಿಸಲಾಗಿದೆ. ಸಂಭವನೀಯ ಉಗ್ರರ ದಾಳಿಯನ್ನು ಹಿಮ್ಮೆಟಿಸುವುದು, ಶಾಂತಿ ಮತ್ತು ಸುರಕ್ಷತೆಯಿಂದ ಸ್ವತಂತ್ರ್ಯ ದಿನಾಚರಣೆ ಆಚರಿಸಲು ಮುನ್ನೆಚ್ಚರಿಕೆವಹಿಸಲಾಗಿದೆ. ಈ ನಡುವೆ ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆಯ ನಡುವೆ ಖಾಲಿಸ್ತಾನಿಗಳು ನುಸುಳಿ ಅಹಿತಕರ ಘಟನೆಗಳು ನಡೆದಿದ್ದವು. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಸಿಕ್ ಸಮುದಾಯದ ನಿಶಾನ್ ಸಾಹಿಬ್ ಧ್ವಜಾರೋಹಣ ನೇರವೇರಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು