Categories: ದೇಶ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸಿದ ರಾಷ್ಟ್ರಪತಿ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಶಿಷ್ಟಾಚಾರದಂತೆ ದೇಶವನ್ನು ಉದ್ದೇಶಿಸಿ ಮಾತನಾಡಿದರು.

ಇದು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಆಗಿರುವುದರಿಂದ ತನ್ನದೇ ಆದ ಮಹತ್ವ ಪಡೆದಿದೆ ಎಂದು ಹೇಳಿದ ರಾಷ್ಟ್ರಪತಿ ಕೋವಿಂದ್, ಮಹಾತ್ಮ ಗಾಂಧಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು.

ಅಮೃತ ಮಹೋತ್ಸವದಲ್ಲಿರುವ ನಮಗೆ ಸಂಭ್ರಮ ಹೆಚ್ಚಿದೆ. ಆದರೆ ದೇಶದಲ್ಲಿ ಕೊರೋನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಎಚ್ಚರ ಮರೆಯಬಾರದು. ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ಕೊರೋನಾ ಮಾರ್ಗಸೂಚಿ ಪಾಲಿಸಬೇಕು ಎಂದು ಕೋವಿಂದ್ ಎಚ್ಚರಿಕೆ ನೀಡಿದರು. ಪ್ರತಿಯೊಬ್ಬರು ಕೊರೋನಾ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ನಾವು ಒಳಿತಿನ ಹಾದಿಯಲ್ಲಿ ಹೇಗೆ ಮುನ್ನಡೆಯಬೇಕು ಎನ್ನುವುದನ್ನು ಮಹಾತ್ಮ ಗಾಂಧಿ ತೋರಿಸಿಕೊಟ್ಟರು. ತಪ್ಪು ಹಾದಿಯಲ್ಲಿ ವೇಗವಾಗಿ ಓಡುವುದಕ್ಕಿಂತಲ್ಲೂ ಸರಿಯಾದ ದಾರಿಯಲ್ಲಿ ನಿಧಾನವಾಗಿ ಹೆಜ್ಜೆ ಹಾಕುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ನಾವು ಸ್ವಾತಂತ್ರ್ಯ ಸಿಕ್ಕ ದಿನವನ್ನು ಸಂಭ್ರಮದಿಂದ ಆಚರಿಸುತ್ತೇವೆ. ಆದರೆ ಈ ದಿನದ ಹಿಂದೆ ಹಲವರ ತ್ಯಾಗ ಬಲಿದಾನಗಳಿವೆ. ದೇಶ ಕಾಣದ ಹಲವರ ಹೋರಾಟ, ತಿಳಿಯದೇ, ಅರಿಯದೇ ಹೋದ ಹಲವರ ಬಲಿದಾನಗಳಿವೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ, ಹೋರಾಟ ಮಾಡಿದ ಸ್ವಾತಂತ್ರ್ಯ ವೀರರಿಗೆ ನನ್ನ ನಮನಗಳು. ಈ ಸಂದರ್ಭದಲ್ಲಿ ನಿಂತು ಹಿಂದಿನ 75 ವರ್ಷಗಳನ್ನು ಮೆಲುಕು ಹಾಕಿದರೆ ನಾವೆಷ್ಟು ದೂರ ಸಾಗಿದ್ದೇವೆ ಅನ್ನೋದು ಅರಿವಾಗುತ್ತದೆ. ಹಲವು ಅಡೆ ತಡೆಗಳನ್ನು ಮೆಟ್ಟಿ ನಿಂತು ಒಗ್ಗಟ್ಟಾಗಿ ಹೋರಾಡಿದ್ದೇವೆ. ಸವಾಲುಗಳನ್ನು ಒಗ್ಗಟ್ಟಾಗಿ ಎದುರಿಸಿದ್ದೇವೆ. ನೋವು ನಲಿವುಗಳನ್ನು ಸಮನಾಗಿ ಹಂಚಿದ್ದೇವೆ ಎಂದರು.

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ರದರ್ಶನ ಕಂಡು ದೇಶವೇ ಹೆಮ್ಮೆ ಪಡುತ್ತಿದೆ. ಹಾಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಮತ್ತಷ್ಟು ವಿಶೇಷವಾಗಿದೆ. 121 ವರ್ಷಗಳ ಬಳಿಕ ಒಲಿಂಪಿಕ್ಸ್ ಇತಿಹಾಸದಲ್ಲಿ ನಮ್ಮ ದೇಶದಿಂದ ಅತೀ ಹೆಚ್ಚು ಕ್ರೀಡಾಪಟುಗಳನ್ನು ಕಳುಹಿಸಿದ್ದೇವೆ ಅವರು ಉತ್ತಮ ಸಾಧನೆ ತೋರಿ ಪದಕ ಬೇಟೆಯಾಡಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.

Sampriya YK

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

21 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

34 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

58 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago