ನವದೆಹಲಿ: ಮೂರು ರಾಜ್ಯಗಳಲ್ಲಿ ಕೋವಿಡ್ ಹೊಸ ತಳಿ ಜೆಎನ್.1 ಪತ್ತೆಯಾಗಿದೆ. ಗೋವಾದಲ್ಲಿ 18, ಕೇರಳ ಮತ್ತು ಕರ್ನಾಟಕದಲ್ಲಿ ತಲಾ ಒಂದು ಹೊಸ ಪ್ರಕರಣ ಸೇರಿ ಒಟ್ಟು 20 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು INSACOG (ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ) ಅಂಕಿ ಅಂಶ ತಿಳಿಸಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ಕೇಂದ್ರ ಸರ್ಕಾರ ನಿರಂತರವಾಗಿ ಎಚ್ಚರಿಕೆಯಿಂದಿರಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೇಶದಲ್ಲಿ ಇಂದು ಹೊಸದಾಗಿ 614 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21 ರಿಂದ ಈವರೆಗೆ ದೃಢಪಟ್ಟ ಅತಿ ಹೆಚ್ಚು ದೈನಂದಿನ ಪ್ರಕರಣ ಇದಾಗಿದೆ.
ಜೆಎನ್.1 ಸೋಂಕು ಹರಡುವಿಕೆ ವೇಗವಾಗಿದೆ, ಆದರೆ ಜಾಗತಿಕವಾಗಿ ಆರೋಗ್ಯದ ಮೇಲಿನ ಅಪಾಯ ಕಡಿಮೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…