2013 ರ ಪಾಟ್ನಾ ಸರಣಿ ಸ್ಫೋಟ:9 ಮಂದಿ ದೋಷಿ

ನವದೆಹಲಿ:ಗಾಂಧಿ ಮೈದಾನದಲ್ಲಿ ಅಂದಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ‘ಹುಂಕಾರ್’ ರ್ಯಾಲಿ ವೇಳೆ ಸ್ಫೋಟ ಸಂಭವಿಸಿದ್ದು, ಐವರು ಮೃತಪಟ್ಟು 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.ರ್ಯಾಲಿ ನಡೆಯುವ ಸ್ಥಳದ ಸುತ್ತ ಆರು ಸ್ಫೋಟಗಳು ನಡೆದಿದ್ದರೆ, ಮೋದಿ ಭಾಷಣ ಮಾಡಿದ ವೇದಿಕೆಯಿಂದ 150 ಮೀಟರ್‌ ಅಂತರದಲ್ಲಿ ಎರಡು ಬಾಂಬ್‌ಗಳು ಸ್ಫೋಟಗೊಂಡಿವೆ. ಕೊನೆಯ ಬಾಂಬ್ ಮಧ್ಯಾಹ್ನ 12.25 ಕ್ಕೆ ಸ್ಫೋಟಗೊಂಡಿತು – ಮೋದಿ ಮತ್ತು ಬಿಜೆಪಿಯ ಉನ್ನತ ನಾಯಕರು ವೇದಿಕೆಗೆ ಬರುವ 20 ನಿಮಿಷಗಳ ಮೊದಲು. ನಂತರ ಸ್ಥಳದ ಬಳಿ ನಾಲ್ಕು ಜೀವಂತ ಬಾಂಬ್‌ಗಳು ಪತ್ತೆಯಾಗಿವೆ.

2013ರ ಪಾಟ್ನಾ ಸರಣಿ ಸ್ಫೋಟ ಪ್ರಕರಣದ 10 ಆರೋಪಿಗಳ ಪೈಕಿ ಒಂಬತ್ತು ಮಂದಿ ದೋಷಿ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.

ಬಿಹಾರ ಪೊಲೀಸರು ಇದನ್ನು ಭಯೋತ್ಪಾದಕ ದಾಳಿ ಎಂದು ಕರೆಯದಿದ್ದರೂ, ಆಗಿನ ಪೊಲೀಸ್ ಮಹಾನಿರ್ದೇಶಕ ಅಭಯಾನಂದ್ ಅವರು ಐಇಡಿ ಮತ್ತು ಟೈಮರ್‌ಗಳ ಬಳಕೆಯನ್ನು ಖಚಿತಪಡಿಸಿದ್ದರು. ಅಮೋನಿಯಂ ನೈಟ್ರೇಟ್, ಡಿಟೋನೇಟರ್‌ಗಳು, ಟೈಮರ್ ಸಾಧನಗಳು ಮತ್ತು ಕಬ್ಬಿಣದ ಮೊಳೆಗಳ ಬಳಕೆಯ ಬಗ್ಗೆಯೂ ಗುಪ್ತಚರ ಮೂಲಗಳು ಸುಳಿವು ನೀಡಿದ್ದವು. ಎನ್‌ಐಎ 2014ರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಹೈದರ್ ಅಲಿ ಅಲಿಯಾಸ್ ‘ಬ್ಲ್ಯಾಕ್ ಬ್ಯೂಟಿ’, ತೌಫೀಕ್ ಅನ್ಸಾರಿ, ಮೋಜಿಬುಲ್ಲಾ ಮತ್ತು ನುಮಾನ್ ಅನ್ಸಾರಿ ಅವರನ್ನು ಬಂಧಿಸಿತ್ತು. ಕೇಂದ್ರ ಸಂಸ್ಥೆ ಅವರ ತಲೆಗೆ 5 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು.

Swathi MG

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

2 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

3 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

8 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

18 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

30 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

36 mins ago