ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 107 ನೇ ಸಂಚಿಕೆಯನ್ನು ನ.26, 2023 ರಂದು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ಒಂದು ಪ್ರಧಾನಿ ಮೋದಿಯವರು “ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಸ್ಫೂರ್ತಿಯಾಗುತ್ತಿರುವಂತೆಯೇ; ‘ವೋಕಲ್ ಫಾರ್ ಲೋಕಲ್’ ಯಶಸ್ಸು ‘ಅಭಿವೃದ್ಧಿ ಹೊಂದಿದ ಭಾರತ – ಸಮೃದ್ಧ ಭಾರತ’ಕ್ಕೆ ಬಾಗಿಲು ತೆರೆಯುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ಹೇಳಿದ್ದಾರೆ.
ಈ ದಿನ, ನ.26 ಮತ್ತೊಂದು ಕಾರಣಕ್ಕಾಗಿ ಅತ್ಯಂತ ಮಹತ್ವದ್ದಾಗಿದೆ. 1949 ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ಭಾರತದ ಸಂವಿಧಾನವನ್ನು ಅಂಗೀಕರಿಸಿತು ಅಂತ ಹೇಳಿದರು. ಮುಂಬೈನಲ್ಲಿ 2008ರ ನವೆಂಬರ್ 26 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ,ಜನರನ್ನು ರಕ್ಷಿಸುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಸೈನಿಕರನ್ನು ಇಂದು ದೇಶವು ಸ್ಮರಿಸುತ್ತಿದೆ. ಆ ಎಲ್ಲ ವೀರ ಪುರುಷರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದರು.