News Karnataka Kannada
Saturday, May 04 2024
ದೇಶ

ಕಾರಿನ ಡಿಕ್ಕಿ ಓಪನ್​ ಮಾಡಿದವರಿಗೆ ಕಾದಿತ್ತು ಶಾಕ್ : ಇವರೆಂಥಾ ಕ್ರೂರಿಗಳು !

Car
Photo Credit : NewsKarnataka

ನವದೆಹಲಿ: ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ನಾಲ್ಕು ಅಥವಾ ಐದು ಜನರು ಕುಳಿತು ಪ್ರಯಾಣಿಸಬಹುದಾದ ಕಾರಿನಲ್ಲಿ ಲೋಡ್ ಮಟ್ಟವನ್ನು ಮೀರಿ ಚಲಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು, ತಕ್ಷಣವೇ ಕಾರನ್ನು ತಡೆದು ಡಿಕ್ಕಿ ಓಪನ್ ಮಾಡಿದಾಗ ಕಂಡುಬಂದ ದೃಶ್ಯ ನೋಡಿ ಬೆಚ್ಚಿಬಿದ್ದ ಭಯಾನಕ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ವರದಿಯಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರಿನೊಳಗೆ ಬರೋಬ್ಬರಿ 30ಕ್ಕೂ ಹೆಚ್ಚು ಮೇಕೆಗಳು ಮತ್ತು ಕುರಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಸೆರೆಹಿಡಿದ ಸ್ಥಳೀಯರು ಚಾಲಕನನ್ನು ಹಿಗ್ಗಾಮುಗ್ಗಾ ಜಾಡಿಸಿದ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಬಲವಂತವಾಗಿ ಕಾರಿನೊಳಗೆ 30ಕ್ಕೂ ಹೆಚ್ಚು ಮೇಕೆ ಮತ್ತು ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ಸದ್ಯ ಪೊಲೀಸರು ಮೇಕೆಗಳನ್ನು ಹಾಗು ಕುರಿಗಳನ್ನು ಸ್ಥಳೀಯ ನೆರವಿನಿಂದ ರಕ್ಷಿಸಿದ್ದು, ಕಾರನ್ನು ಹಾಗು ಕ್ರೂರಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು