Categories: ದೇಶ

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್: ವಿತ್ತ ಸಚಿವೆ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನ ಯಶಸ್ವಿಯಾಗಿ ಮುಂದುವರೆದಿದೆ. ನಾವು 3 ಕೋಟಿ ಮನೆಗಳ ಗುರಿಯ ಸನಿಹದಲ್ಲೇ ಇದ್ದೇವೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಹಾಗೆಯೇ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದರು. ಪ್ರವಾಸೋದ್ಯಮ ಕೇತ್ರದಲ್ಲಿ ಇದೀಗ ಭಾರೀ ಬದಲಾವಣೆ ಆಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಗಮನ ಹರಿಸಿದೆ. ಎಲೆಕ್ಟ್ರಿಕಲ್​ ಬಸ್​, ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 40 ಸಾವಿರ ರೈಲ್ವೆ ಕೋಚ್​ಗಳ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ. ಸಣ್ಣಪುಟ್ಟ ನಗರಗಳಿಗೂ ,ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುವುದು. ಮೆಟ್ರೋ ಮತ್ತು ನಮೋ ಭಾರತ್ ರೈಲ್ವೆಗೆ ಹೆಚ್ಚಿನ ಹೊತ್ತು. ವಿಮಾನಯಾನ ಕ್ಷೇತ್ರಕ್ಕೆ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡಲಾಗುತ್ತಿದೆ. ಸಂಶೋಧನೆ, ತಂತ್ರಜ್ಞಾನಕ್ಕೆ ಹೆಚ್ಚಿನ ಹೊತ್ತು. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್. ದೇಶದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಬದಲಾವಣೆ ಆಗಿದೆ. ಮತ್ಸ್ಯ ಯೋಜನೆಯಿಂದ 55 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಸುವ ಗುರಿಯಿದೆ. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರಿಕೆ ಲಾಭ ಸಿಗಲಿದೆ ಎಂದರು. 1 ಕೋಟಿ ಮನೆಗಳ ಮೇಲೆ ಸೋಲಾರ್ ಪ್ಯಾನಲ್ ಅಳವಡಿಕೆ ಮಾಡಲಾಗುತ್ತದೆ.

Ashitha S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago