ಹರಿಯಾಣ: ಪಂಜಾಬ್ ಮತ್ತು ಹರಿಯಾಣ ರೈತರು ನಡೆಸುತ್ತಿರುವ ‘ದೆಹಲಿಚಲೋ’ ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.
ಇದು 2021ರ ಹೋರಾಟದಲ್ಲಿ ನಡೆದ ಹಿಂಸಾಚಾರವನ್ನು ಮರುಕಳಿಸುವ ಸೂಚನೆ ನೀಡಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಪಂಜಾಬ್ ಮತ್ತು ಹರಿಯಾಣದ ಹಲವು ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಸಂಘರ್ಷ ವಾತಾವರಣ ಉಂಟಾಗಿದೆ.
ಒಂದೆಡೆ ರೈತ ನಾಯಕರು ಶಾಂತಿಯುತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳುತ್ತಿದ್ದರೆ, ಪ್ರತಿಭಟನಾಕಾರರು ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ.
ಈ ನಡುವೆ ರೈತ ಹೋರಾಟ ಆರಂಭವಾದ ದಿನದಿಂದ ಅಮಾನತಿನಲ್ಲಿರುವ ಮೊಬೈಲ್ ಇಂಟರ್ನೆಟ್, ಸಂದೇಶ ರವಾನೆ ಸೇವೆಯನ್ನು ಫೆಬ್ರವರಿ 19ರ ವರೆಗೆ ನಿರ್ಬಂಧಿಸಿ ವಿಸ್ತರಿಸಲಾಗಿದೆ.
ಇನ್ನು ಪ್ರತಿಭಟನೆ ಹತ್ತಿಕ್ಕಲು ಸರ್ಕಾರದ ನಡೆಸುತ್ತಿರುವ ಯತ್ನಗಳು ಮುಂದುವರೆದಿದ್ದು, ಇಂದು ಸಂಜೆ 5 ಗಂಟೆಗೆ ರೈತ ಸಂಘಟನೆಗಳೊಂದಿಗೆ 4ನೇ ಸುತ್ತಿನ ಸಭೆ ನಿಗದಿಯಾಗಿದೆ.