News Karnataka Kannada
Tuesday, April 30 2024
ದೇಶ

ತೀವ್ರಗೊಂಡ ‘ದೆಹಲಿ ಚಲೋ’: ಇಂದು ರೈತರು-ಸರ್ಕಾರದ ನಡುವೆ 4ನೇ ಸುತ್ತಿನ ಮಾತುಕತೆ

Delhi
Photo Credit : News Kannada

ಹರಿಯಾಣ: ಪಂಜಾಬ್​ ಮತ್ತು ಹರಿಯಾಣ ರೈತರು ನಡೆಸುತ್ತಿರುವ ‘ದೆಹಲಿಚಲೋ’ ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್​ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್​ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಇದು 2021ರ ಹೋರಾಟದಲ್ಲಿ ನಡೆದ ಹಿಂಸಾಚಾರವನ್ನು ಮರುಕಳಿಸುವ ಸೂಚನೆ ನೀಡಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ.

ಪಂಜಾಬ್​ ಮತ್ತು ಹರಿಯಾಣದ ಹಲವು ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಸಂಘರ್ಷ ವಾತಾವರಣ ಉಂಟಾಗಿದೆ.

ಒಂದೆಡೆ ರೈತ ನಾಯಕರು ಶಾಂತಿಯುತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳುತ್ತಿದ್ದರೆ, ಪ್ರತಿಭಟನಾಕಾರರು ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ.

ಈ ನಡುವೆ ರೈತ ಹೋರಾಟ ಆರಂಭವಾದ ದಿನದಿಂದ ಅಮಾನತಿನಲ್ಲಿರುವ ಮೊಬೈಲ್​ ಇಂಟರ್​ನೆಟ್​, ಸಂದೇಶ ರವಾನೆ ಸೇವೆಯನ್ನು ಫೆಬ್ರವರಿ 19ರ ವರೆಗೆ ನಿರ್ಬಂಧಿಸಿ ವಿಸ್ತರಿಸಲಾಗಿದೆ.

ಇನ್ನು ಪ್ರತಿಭಟನೆ ಹತ್ತಿಕ್ಕಲು ಸರ್ಕಾರದ ನಡೆಸುತ್ತಿರುವ ಯತ್ನಗಳು ಮುಂದುವರೆದಿದ್ದು, ಇಂದು ಸಂಜೆ 5 ಗಂಟೆಗೆ ರೈತ ಸಂಘಟನೆಗಳೊಂದಿಗೆ 4ನೇ ಸುತ್ತಿನ ಸಭೆ ನಿಗದಿಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು