ನವದೆಹಲಿ: ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ಬ್ರಿಟಿಷರ್ ದಾಸ್ಯದಿಂದ ಮುಕ್ತವಾಗಿ 1947 ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ದೊರೆಯಿತು. ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ಜೀವನ ಮತ್ತು ಜೀವ ಮುಡಿಪಾಗಿಟ್ಟಿದ್ದಾರೆ. ಅವರ ತ್ಯಾಗ, ಸೇವೆಯ ಪ್ರತಿರೂಪವೇ ಸ್ವಾತಂತ್ರ್ಯ. ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 7.33ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಾರೆ. ರಾಷ್ಟ್ರೀಯ ಗೌರವ ಸಲ್ಲಿಕೆ, ಬ್ಯಾಂಡ್ ಮೂಲಕ ರಾಷ್ಟ್ರಗೀತೆ, ಗೌರವ ವಂದನೆ ನೆರವೇರುತ್ತದೆ. ಇನ್ನು ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ.
ಕೆಂಪುಕೋಟೆಯ 77ನೇ ಸ್ವಾತಂತ್ರ್ಯ ದಿನಾಚರಣೆಗೆ 31 ಜನ ಕನ್ನಡಿಗರು ಸೇರಿದಂತೆ ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನಿಸಲಾಗಿದೆ.