News Karnataka Kannada
Sunday, April 28 2024
ದೇಶ

ಜ್ಞಾನವಾಪಿ ಎಎಸ್‌ಐ ಸಮೀಕ್ಷೆ ಕೇಸ್: ಅಲಹಾಬಾದ್ ಹೈಕೋರ್ಟ್​ನಿಂದ ಮಹತ್ವದ ತೀರ್ಪು

Allahabad HC
Photo Credit : By Author

ಅಲಹಾಬಾದ್: ಜ್ಞಾನವಾಪಿ ಮಸೀದಿಯ ‘ವೈಜ್ಞಾನಿಕ ಸಮೀಕ್ಷೆ’ಗೆ ಅಲಹಾಬಾದ್ ಹೈಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿರುವ ಕೋರ್ಟ್​, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಜೊತೆಗೆ ಮಸೀದಿಯ ಸಂಕೀರ್ಣವನ್ನು ವೈಜ್ಞಾನಿಕವಾಗಿ ಸಮೀಕ್ಷೆಗೆ ಒಳಪಡಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಿದೆ.

ಕಳೆದ ಜುಲೈ 21 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯವು ASI ಸರ್ವೇಗೆ ಅನುಮತಿ ನೀಡಿ ಆದೇಶ ನೀಡಿತ್ತು. ಅಂತೆಯೇ ಜುಲೈ 24 ರಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷಾ ತಂಡವು  30 ಸದಸ್ಯರ ನೇತೃತ್ವದಲ್ಲಿ ಮಸೀದಿಯ ಸರ್ವೇ ಕಾರ್ಯವನ್ನು ಆರಂಭಿಸಲಾಗಿತ್ತು. ವಿಡಿಯೋಗ್ರಫಿ ಮತ್ತು ಫೋಟೋಗ್ರಫಿ ಮೂಲಕ ಸರ್ವೇ ಶುರುವಾಗುತ್ತಿದ್ದಂತೆಯೇ ಮಸೀದಿಯ ಆಡಳಿತ ಮಂಡಳಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಬಳಿ ಮಸೀದಿ ಆಡಳಿತ ಮಂಡಳಿ ಮನವಿ ಮಾಡಿಕೊಂಡಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್​, ASI ಸರ್ವೇಗೆ ತಾತ್ಕಾಲಿಕ ತಡೆ ಕೊಟ್ಟು, ಮಸೀದಿ ಆಡಳಿತ ಮಂಡಳಿಗೆ ಗುಜರಾತ್​ನ ಅಲಹಾಬಾದ್​ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ಸೂಚಿಸಿತ್ತು. ಜುಲೈ 27 ರಂದು ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಇವತ್ತು, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಮಾತ್ರವಲ್ಲ, ಎಎಸ್​ಐ ಸರ್ವೇ ನಡೆಸುವಂತೆ ಆದೇಶ ನೀಡಿದೆ.

ಸದ್ಯ ಈ ಸ್ಥಳವು ವರ್ಷಕ್ಕೆ ಒಮ್ಮೆ ಮಾತ್ರ ಪ್ರಾರ್ಥನೆಗೆ ತೆರೆಯುತ್ತದೆ. ಇಲ್ಲಿ ನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ಹಳೆಯ ದೇವಸ್ಥಾನ ಸಂಕೀರ್ಣದೊಳಗೆ ಕಾಣಿಸುವ ಹಾಗೂ ಕಾಣಿಸದ ದೇವತೆಗಳಿಗೆ ಕೂಡ ಪೂಜೆಗೆ ಅನುಮತಿ ಕೊಡಬೇಕು ಎಂದು ಹಿಂದೂಗಳು ಮನವಿ ಮಾಡಿದ್ದರು. ಆದರೆ ಇದು ದೇವಸ್ಥಾನವಲ್ಲ, ಇದು ಮಸೀದಿ, ಜೊತೆಗೆ ಇಲ್ಲಿ ಯಾವುದೇ ವಿಗ್ರಹಗಳಿಲ್ಲ ಎಂದು ಮುಸ್ಲೀಂರ ವಾದವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು