News Karnataka Kannada
Thursday, May 02 2024
ಆಂಧ್ರಪ್ರದೇಶ

ಅಧಿಕಾರಗಳು ಎಲ್ಲ ರಾಜ್ಯಗಳ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು

Madras Highcourt
Photo Credit :

ಚೆನ್ನೈ: ತಮಿಳುನಾಡಿಗೆ ಸಂಸತ್‌ನಲ್ಲಿ ಕಡಿಮೆ ಪ್ರಾತಿನಿಧ್ಯ ನೀಡುವ ಮೂಲಕ ಕಳೆದ 14 ಚುನಾವಣೆಗಳಲ್ಲಿ ಅನ್ಯಾಯ ಮಾಡಲಾಗಿದೆ. ಹೀಗಾಗಿ ಕೋರ್ಟ್ ಅಂದಾಜಿನಂತೆ ಸುಮಾರು 5,600 ಕೋಟಿ ರೂ ಮೊತ್ತದ ಹಣವನ್ನು ಪರಿಹಾರವನ್ನಾಗಿ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಮತ್ತು ಬಿ ಪುಗಳೇಂದಿ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶ ನೀಡಿದೆ.

ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧಿತ್ವದ ಸಂಖ್ಯೆಯನ್ನು ಕಡಿಮೆ ಮಾಡಿದರೆ ಅದರಲ್ಲಿ ರಾಜ್ಯ ಯಾವ ತಪ್ಪೂ ಇಲ್ಲ. ಹೀಗಿದ್ದಾಗ ಅದರ ರಾಜ್ಯಸಭೆಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. ಸಂಸತ್ತನ್ನು ಪ್ರತಿನಿಧಿಸುವ ರಾಜ್ಯಗಳ ಸೀಟುಗಳನ್ನು ನಿರ್ಧರಿಸಲು ಜನಸಂಖ್ಯೆ ಮೂಲವಾಗಬಾರದು. ಜನಸಂಖ್ಯೆ ನಿಯಂತ್ರಣ ಸಾಧಿಸುವಲ್ಲಿ ವಿಫಲವಾದ ರಾಜ್ಯಗಳು ಸಂಸತ್ತಿನಲ್ಲಿ ಅಧಿಕ ಪ್ರಾತಿನಿಧ್ಯದ ಪ್ರಯೋಜನ ಪಡೆಯುತ್ತಾರೆ. ಆದರೆ ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ತಮಿಳುನಾಡು, ಆಂಧ್ರಪ್ರದೇಶದಂತಹ ರಾಜ್ಯಗಳು ಸೀಟುಗಳನ್ನು ಕಳೆದುಕೊಂಡಿವೆ.ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿರುವ ತಮಿಳುನಾಡು, ಆಂಧ್ರಪ್ರದೇಶದಂತಹ ದಕ್ಷಿಣದ ರಾಜ್ಯಗಳಿಗೆ ಏಕೆ ಸಂಸತ್‌ನಲ್ಲಿ ಕೆಲವೇ ಸೀಟುಗಳನ್ನು ನೀಡಲಾಗುತ್ತಿದೆ ಮತ್ತು ಅಧಿಕ ಜನಸಂಖ್ಯೆ ಇರುವ ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಏಕೆ ಅಧಿಕ ಸಂಸತ್ ಸೀಟುಗಳಿವೆ ಎಂದು ಕೇಂದ್ರ ಸರ್ಕಾರವನ್ನು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ.1962ರವರೆಗೂ ಲೋಕಸಭೆಗೆ ತಮಿಳುನಾಡು 41 ಪ್ರತಿನಿಧಿಗಳನ್ನು ಹೊಂದಿತ್ತು. ಆದರೆ ಜನಸಂಖ್ಯೆ ಇಳಿಕೆಯಾದ ಹಿನ್ನೆಲೆಯಲ್ಲಿ ಲೋಕಸಭೆ ಸದಸ್ಯ ಸ್ಥಾನಗಳನ್ನು 39ಕ್ಕೆ ಇಳಿಸಲಾಯಿತು. ಪ್ರತಿ ಮತವೂ ಮುಖ್ಯವಾಗುವುದರಿಂದ ಎರಡು ಸೀಟುಗಳು ಕಡಿಮೆಯಲ್ಲ ಎಂದು ನ್ಯಾಯಪೀಠ, 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಉರುಳಲು ಕಾರಣವಾದ ಅವಿಶ್ವಾಸ ನಿರ್ಣಯವನ್ನು ಉಲ್ಲೇಖಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು