News Karnataka Kannada
Monday, April 29 2024
ಆಂಧ್ರಪ್ರದೇಶ

ಆಂಧ್ರಪ್ರದೇಶ:ಭೀಕರ ರಸ್ತೆ ಅಪಘಾತ ಬಸ್ ಮಗುಚಿ ಬಿದ್ದು 7 ಸಾವು, 45 ಮಂದಿಗೆ ಗಾಯ

Accident.
Photo Credit :

ಚಿತ್ತೂರು:  ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿ ಬಸ್ ವೊಂದು ಮಗುಚಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ.

ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್​ ಪಲ್ಟಿಯಾಗಿದೆ. ಖಾಸಗಿ ಬಸ್ಸಿನಲ್ಲಿ ಸುಮಾರು 63 ಪ್ರಯಾಣಿಕರಿದ್ದರು. ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣವಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯಲ್ಲಿ 7 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ

ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ.ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ.

ಅನಂತಪುರ ಜಿಲ್ಲೆಯ ಧರ್ಮಾವರಂನ ರಾಜೇಂದ್ರ ನಗರದ ವೇಣು ಅವರ ನಿಶ್ಚಿತಾರ್ಥ ಚಿತ್ತೂರು ಜಿಲ್ಲೆಯ ನಾರಾಯಣವನಂ ಮೂಲದ ಯುವತಿ ಜೊತೆ ನಿಶ್ಚಯವಾಗಿತ್ತು. ಭಾನುವಾರ ಬೆಳಗ್ಗೆ ತಿರುಚಾನೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವೇಣು(ವರ) ಕುಟುಂಬವು ಇತರೆ 63 ಮಂದಿಯೊಂದಿಗೆ ಖಾಸಗಿ ಬಸ್‌ನಲ್ಲಿ ಮಧ್ಯಾಹ್ನ 3.30 ಕ್ಕೆ ಧರ್ಮಾವರಂನಿಂದ ಹೊರಟಿತ್ತು. ಚಾಲಕ ವೇಗವಾಗಿ ವಾಹನ​ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ ಎಂದು ತಿಳಿದುಬಂದಿದೆ.

.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು