ಆಂಧ್ರಪ್ರದೇಶ

ಆಂಧ್ರಪ್ರದೇಶ:ಭೀಕರ ರಸ್ತೆ ಅಪಘಾತ ಬಸ್ ಮಗುಚಿ ಬಿದ್ದು 7 ಸಾವು, 45 ಮಂದಿಗೆ ಗಾಯ

ಚಿತ್ತೂರು:  ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿ ಬಸ್ ವೊಂದು ಮಗುಚಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ.

ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್​ ಪಲ್ಟಿಯಾಗಿದೆ. ಖಾಸಗಿ ಬಸ್ಸಿನಲ್ಲಿ ಸುಮಾರು 63 ಪ್ರಯಾಣಿಕರಿದ್ದರು. ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣವಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆಯಲ್ಲಿ 7 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ

ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ.ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ.

ಅನಂತಪುರ ಜಿಲ್ಲೆಯ ಧರ್ಮಾವರಂನ ರಾಜೇಂದ್ರ ನಗರದ ವೇಣು ಅವರ ನಿಶ್ಚಿತಾರ್ಥ ಚಿತ್ತೂರು ಜಿಲ್ಲೆಯ ನಾರಾಯಣವನಂ ಮೂಲದ ಯುವತಿ ಜೊತೆ ನಿಶ್ಚಯವಾಗಿತ್ತು. ಭಾನುವಾರ ಬೆಳಗ್ಗೆ ತಿರುಚಾನೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವೇಣು(ವರ) ಕುಟುಂಬವು ಇತರೆ 63 ಮಂದಿಯೊಂದಿಗೆ ಖಾಸಗಿ ಬಸ್‌ನಲ್ಲಿ ಮಧ್ಯಾಹ್ನ 3.30 ಕ್ಕೆ ಧರ್ಮಾವರಂನಿಂದ ಹೊರಟಿತ್ತು. ಚಾಲಕ ವೇಗವಾಗಿ ವಾಹನ​ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ ಎಂದು ತಿಳಿದುಬಂದಿದೆ.

.

Swathi MG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

32 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

39 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

50 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago