ಆಂಧ್ರ ಪಟ್ಟಣ : ಪ್ರಕಾಶಂ ಜಿಲ್ಲೆಯ ಒಂಗೋಲ್ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ಒಂಬತ್ತು ವೋಲ್ವೋ ಬಸ್ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂಗೋಲ್ ನಗರಾಭಿವೃದ್ಧಿ ಪ್ರಾಧಿಕಾರ (OUDA) ಕಾಂಪ್ಲೆಕ್ಸ್ ಬಳಿ ಖಾಸಗಿ ಟ್ರಾವೆಲ್ ಆಪರೇಟರ್ಗಳು ತಮ್ಮ ವಾಹನಗಳನ್ನು ನಿಲ್ಲಿಸಿದ ಸಂದರ್ಭದಲ್ಲಿ ಘಟನೆ ನಡೆದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇತರ 20 ಬಸ್ಗಳಿಗೆ ವ್ಯಾಪಿಸುವುದನ್ನು ತಪ್ಪಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾವೇರಿ ಟ್ರಾವೆಲ್ಸ್ಗೆ ಸೇರಿದ ಬಸ್ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಆರು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿ ನಂದಿಸಿದ್ದಾರೆ. ಪಾಲಿಕೆ ಅಧಿಕಾರಿಗಳು ಬೆಂಕಿ ನಂದಿಸಲು ನೀರಿನ ಟ್ಯಾಂಕರ್ಗಳನ್ನು ನಿಯೋಜಿಸಿದರು. ಬಸ್ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ.
6 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಬೇಡಿಕೆ ಕಡಿಮೆಯಾದ ಕಾರಣ ಅಲ್ಲಿಯೇ ಬಸ್ಗಳನ್ನು ನಿಲ್ಲಿಸಿದ್ದೇವೆ ಎಂದು ನಿರ್ವಾಹಕರು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.