ಹೈದರಾಬಾದ್: ನಟಿ ಹಾಗೂ ‘ಬಿಗ್ ಬಾಸ್ ತಮಿಳು’ ಸ್ಪರ್ಧಿ ಯಶಿಕಾ ಆನಂದ್ ಕಾರು ಅಪಘಾತಕ್ಕೀಡಾಗಿದೆ.
ಸ್ನೇಹಿತರ ಜೊತೆಗೆ ಯಶಿಕಾ ಆನಂದ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಮಹಾಬಲಿಪುರಂ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಯಶಿಕಾ ಆನಂದ್ ಅವರ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶಿಕಾ ಆನಂದ್ ಗಂಭೀರವಾಗಿ ಗಾಯಗೊಂಡಿದ್ದಾರೆ.
‘ಧುರುವಾಂಗಲ್ ಪಾಥಿನಾರು’ ಮೂಲಕ ಖ್ಯಾತಿ ಗಳಿಸಿದ ನಟಿ ಯಶಿಕಾ ಆನಂದ್ ಪ್ರಯಾಣ ಮಾಡುತ್ತಿದ್ದ ಕಾರು ಜುಲೈ 25 ರಂದು ಮುಂಜಾನೆ 1 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಹಾಬಲಿಪುರಂನ ಈಸ್ಟ್ ಕೋಸ್ಟ್ ರೋಡ್ನಲ್ಲಿ ಯಶಿಕಾ ಆನಂದ್ ಅವರ ಕಾರು ಅತಿ ವೇಗವಾಗಿ ಸಾಗುತ್ತಿತ್ತು. ಅತಿಯಾದ ವೇಗ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಜಾರಿ ಬಿತ್ತು.
ಆಗ, ಕಾರಿನಲ್ಲಿದ್ದವರನ್ನು ರಕ್ಷಿಸಲು ಪ್ರತ್ಯಕ್ಷದರ್ಶಿಗಳು ಓಡಿ ಬಂದರು. ಅಷ್ಟರಲ್ಲಾಗಲೇ, ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ಪ್ರತ್ಯಕ್ಷದರ್ಶಿಗಳು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದರು.