ಕಾಕಿನಾಡ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗಂಡೆಪಲ್ಲಿ ಮಂಡಲ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈ ಬಸ್ ವಿಜಯನಗರದಿಂದ ಏಲೂರು ಕಡೆಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ಬಸ್ ನಲ್ಲಿ ವರ ಕೂಡ ಇದ್ದು, ಒಟ್ಟು 36 ಜನರು ಬಸ್ ಲ್ಲಿದ್ದರು.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವರನ ಚಿಕ್ಕಪ್ಪ ಕೋದಂಡ ರಾಮಯ್ಯ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇಮ್ನು ಈ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಮತ್ತು ಜಗ್ಗಂಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಜನಗರಂ ಜಿಎಸ್ಎಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪಲ್ಟಿಯಾಗಿದ್ದ ಬಸ್ ಅನ್ನು ಕ್ರೇನ್ ಸಹಾಯದಿಂದ ಹೆದ್ದಾರಿಯಿಂದ ಹೊರ ತೆಗೆಯಲಾಗಿದೆ ಎನ್ನಲಾಗುತ್ತಿದೆ.