ಆಂಧ್ರಪ್ರದೇಶ

ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧ: ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

ಅಮರಾವತಿ: ಉದ್ರಿಕ್ತ ಪ್ರತಿಭಟನಾಕಾರರು ಆಂಧ್ರ ಪ್ರದೇಶದ ಸಾರಿಗೆ ಸಚಿವ ಪಿ.ವಿಶ್ವರೂಪು ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಹೊಸದಾಗಿ ರಚನೆಯಾಗಿರುವ ಕೋನಸೀಮ ಜಿಲ್ಲೆಯ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಪ್ರತಿಭಟನೆಯ ವೇಳೆ ಈ ಘಟನೆ ನಡೆದಿದೆ.

ಕೋನಸೀಮ ಜಿಲ್ಲೆಯನ್ನು ‘ಬಿ.ಆರ್‌.ಅಂಬೇಡ್ಕರ್‌ ಕೋನಸೀಮ’ ಎಂದು ಬದಲಾಯಿಸುವ ಪ್ರಸ್ತಾಪದ ವಿರುದ್ಧ ಅಮಲಾಪುರಂ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಅದರಿಂದ ಉದ್ರೇಕಗೊಂಡ ಗುಂಪು ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದೆ.

ಕೆಲವು ರಾಜಕೀಯ ಪಕ್ಷಗಳು ಹಾಗೂ ಸಮಾಜ ಘಾತುಕ ಶಕ್ತಿಗಳು ಬೆಂಕಿ ಹಚ್ಚುವ ಮೂಲಕ ಹಿಂಸಾಚಾರ ನಡೆಸಲು ಪ್ರೇರೇಪಣೆ ನೀಡಿರುವುದಾಗಿ ಗೃಹ ಸಚಿವೆ ತಾನೇಟಿ ವನಿತಾ ಆರೋಪಿಸಿದ್ದಾರೆ. ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಸಚಿವ ವಿಶ್ವರೂಪು ಅವರ ನಿವಾಸ, ಕಚೇರಿ, ಪೊಲೀಸ್‌ ವಾಹನ ಹಾಗೂ ಶಿಕ್ಷಣ ಸಂಸ್ಥೆಯ ಬಸ್‌ವೊಂದಕ್ಕೆ ಬೆಂಕಿ ಹಚ್ಚಲಾಗಿದೆ. ವಿಶ್ವರೂಪು ಮತ್ತು ಅವರ ಕುಟುಂಬದ ಸದಸ್ಯರು ಪೊಲೀಸರ ರಕ್ಷಣೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲಾಗುತ್ತದೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವೆ ತಾನೇಟಿ ಹೇಳಿದ್ದಾರೆ.

ಪೂರ್ವ ಗೋದಾವರಿಯಿಂದ ಬೇರ್ಪಡಿಸಿ ಕೋನಸೀಮಾ ಜಿಲ್ಲೆಯನ್ನು ಏಪ್ರಿಲ್‌ 4ರಂದು ರಚಿಸಲಾಗಿದೆ. ಜಿಲ್ಲೆಯ ಹೆಸರನ್ನು ಬಿ.ಆರ್‌.ಅಂಬೇಡ್ಕರ್‌ ಕೋನಸೀಮ ಎಂದು ಬದಲಿಸುವ ಬಗ್ಗೆ ರಾಜ್ಯ ಸರ್ಕಾರವು ಪ್ರಸ್ತಾವಿತ ಅಧಿಸೂಚನೆ ಹೊರಡಿಸಿತ್ತು ಹಾಗೂ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ತಿಳಿಸಲಾಗಿತ್ತು.

ಕೋನಸೀಮ ಸಾಧನಾ ಸಮಿತಿಯು ಹೆಸರು ಬದಲಿಸುವ ಪ್ರಸ್ತಾಪವನ್ನು ವಿರೋಧಿಸಿತ್ತು. ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಸಮಿತಿಯು ಪ್ರತಿಭಟನೆ ಆಯೋಜಿಸಿ, ಕೋನಸೀಮ ಹೆಸರು ಉಳಿಸಿಕೊಳ್ಳುವಂತೆ ಆಗ್ರಹಿಸಿತ್ತು. ಪೊಲೀಸರು ಪ್ರತಿಭಟನೆಯನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳಿಂದಾಗಿ ಪ್ರತಿಭಟನಾಕಾರರು ಉದ್ರಿಕ್ತರಾಗಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತು.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

5 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

13 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

30 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

31 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

42 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

43 mins ago