ಆಂಧ್ರಪ್ರದೇಶ: ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ತಿರುಪತಿಗೆ ಭೇಟಿ ನೀಡಿದ್ದು, ಅಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಕಳೆದ ದಿನ ಸಂಜೆ ತಿರುಪತಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 8 ಗಂಟೆಗೆ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 8 ರಿಂದ 8.45 ರವರೆಗೆ ದೇವಾಲಯದೊಳಗೆ ಇದ್ದ ಮೋದಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕಳೆದ ದಿನ(ನ.26) ಸಂಜೆ ಆಗಮಿಸಿದ ಪ್ರಧಾನಿಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸ್ವಾಗತ ಕೋರಿದ್ದಾರೆ. ತಿರುಮಲಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.
ಇನ್ನು ತಿರುಪತಿ ಮತ್ತು ತಿರುಮಲದಲ್ಲಿ ಭದ್ರತೆಯನ್ನು ತೀವ್ರ ಬಿಗಿಗೊಳಿಸಲಾಗಿದೆ.
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.