ಪಲ್ನಾಡು(ಆಂಧ್ರ ಪ್ರದೇಶ): ಟ್ರಕ್ ಮತ್ತು ನಿಂತಿದ್ದ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನ ಜಾವ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ.
ಗಾಯಗೊಂಡವರನ್ನು ನರಸರೌಪೆಟ್ ನಲ್ಲಿರುವ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರ್ಜಾಲ ಡಿಎಸ್ ಪಿ ಜಯರಾಮ್ ತಿಳಿಸಿದ್ದಾರೆ. ನಿನ್ನೆ ಭಾನುವಾರವಷ್ಟೇ ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ನಡೆದಿತ್ತು.
ಮೃತಪಟ್ಟವರೆಲ್ಲರೂ ಬೀದರ್ ಜಿಲ್ಲೆಯವರಾಗಿದ್ದು ಮೃತದೇಹಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮನವಿ ಮಾಡಿಕೊಂಡಿದ್ದಾರೆ.