ವಿಜಯವಾಡ: ಕೈ ಹಿಡಿದ ಪತಿಯನ್ನು ಹಬ್ಬಗಳ ಸಂದರ್ಭದಲ್ಲಿ ಪೂಜಿಸುವುದು ಹಿಂದೂಗಳ ಸಂಪ್ರದಾಯ. ಆದರೆ ಮಹಿಳೆಯೊಬ್ಬಳು ಅಗಲಿದ ತನ್ನ ಪತಿಗಾಗಿಯೇ ದೇವಾಲಯವೊಂದನ್ನು ಕಟ್ಟಿಸಿ ಪೂಜಿಸುತ್ತಿರುವ ಅಪರೂಪದ ವಿದ್ಯಾಮಾನ ಆಂದ್ರ ಪ್ರದೇಶದಿಂದ ವರದಿ ಆಗಿದೆ.
ಪ್ರಕಾಸಂ ಜಿಲ್ಲೆಯಲ್ಲಿ ಪದ್ಮಾವತಿ ಎನ್ನುವ ಮಹಿಳೆಯೇ ಪತಿ ಅಂಕಿರೆಡ್ಡಿ ಅವರಿಗೆ ದೇಗುಲ ನಿರ್ಮಿಸಿದ್ದಾರೆ. ತನ್ನ ತಾಯಿ ಅವರ ಪತಿಗೆ ನಮಸ್ಕರಿಸಿ, ಪೂಜೆ ಮಾಡುತ್ತಿರುವುದನ್ನು ಗಮನಿಸಿದ್ದ ಪದ್ಮಾವತಿ ಅದನ್ನು ತಮ್ಮ ಬದುಕಲ್ಲೂ ಅಳವಡಿಸಿಕೊಂಡಿದ್ದು, ಪತಿಯನ್ನು ಮರೆಯಲು ಆಗದೇ ಅವರ ಹೆಸರಿನಲ್ಲಿ ದೇಗುಲ ಕಟ್ಟಿ ಪ್ರತಿದಿನ ಪೂಜಿಸುತ್ತಿದ್ದಾರೆ. ಅಂಕಿ ರೆಡ್ಡಿ ಅವರು ಕಳೆದ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅಂಕಿರೆಡ್ಡಿ ಸಾವನ್ನಪ್ಪಿದ ಕೆಲವು ದಿನಗಳ ಬಳಿಕ ಪದ್ಮಾವತಿ ಅವರ ಕನಸಿನಲ್ಲಿ ಅಂಕಿರೆಡ್ಡಿ ಬಂದು ತನಗಾಗಿ ದೇವಸ್ಥಾನ ಕಟ್ಟುವಂತೆ ಹೇಳಿದ್ದನಂತೆ. ಅದಕ್ಕಾಗಿ ದೇವಸ್ಥಾನ ನಿರ್ಮಿಸಿ, ಅದರಲ್ಲಿ ಅಂಕಿರೆಡ್ಡಿ ಮೂರ್ತಿ ಪ್ರತಿಷ್ಠಾಪಿಸಿ ದಿನವೂ ಪೂಜೆ ಸಲ್ಲಿಸುತ್ತಿದ್ದಾಳೆ. ನನ್ನ ಪತಿ ಬದುಕಿದ್ದಾಗಲೂ ಅವರನ್ನು ದೇವರೆಂದೇ ಭಾವಿಸಿದ್ದೆ ಎಂದು ಪದ್ಮಾವತಿ ಹೇಳುತ್ತಾರೆ.
ಅಂಕಿರೆಡ್ಡಿಯವರ ಜನ್ಮದಿನ ಸೇರಿ ಉಳಿದ ಕೆಲವು ವಿಶೇಷ ದಿನಗಳಲ್ಲಿ ವಿಗ್ರಹಕ್ಕೆ ಅಭಿಷೇಕ, ವಿಶೇಷ ಪೂಜೆ ನಡೆಯುತ್ತದೆ. ಪ್ರತಿ ಹುಣ್ಣಿಮೆಯಂದು ಬಡಜನರಿಗೆ ಊಟ ಹಾಕಲಾಗುತ್ತದೆ. ಅಂಕಿರೆಡ್ಡಿ ಸ್ನೇಹಿತ ತಿರುಪತಿ ರೆಡ್ಡಿ ಅವರೊಂದಿಗೆ ಸೇರಿ, ನನ್ನ ಮಗ ಶಿವಶಂಕರ್ ರೆಡ್ಡಿ ಈ ದೇಗುಲದ ಸೇವೆಗಳನ್ನು ಮಾಡುತ್ತಿದ್ದಾನೆ ಎಂದು ಪದ್ಮಾವತಿ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.
ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮೊದಲ ಬ್ಯಾಚ್…
ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್ರಿಂದ…
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…