ಮೂರು ರಾಜಧಾನಿಗಳ ಬಗ್ಗೆ ವಿವಾದದ ನಡುವೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರ ರಾಜ್ಯಕ್ಕೆ ಒಂದೇ ರಾಜಧಾನಿ ಅದು ಅಮರಾವತಿ ಎಂದು ಘೋಷಿಸಿದರು. ಇನ್ನು ಮೂರು ರಾಜಧಾನಿ ಮಸೂದೆಯನ್ನ ಹಿಂಪಡೆದು ತನ್ನ ನಿರ್ಧಾರವನ್ನ ಹೈಕೋರ್ಟ್ಗೆ ತಿಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಈ ಕ್ಷೇತ್ರವನ್ನ ನಾನು ಪ್ರೀತಿಸುತ್ತೇನೆ ಎಂದು ಸಿಎಂ ಜಗನ್, ಅಮರಾವತಿಯನ್ನ ರಾಜಧಾನಿ ಎನ್ನಲು ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇಡೀ ರಾಜ್ಯದ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದ್ದು, ವಿಶಾಖಪಟ್ಟಣಂ ರಾಜ್ಯದ ಅತಿದೊಡ್ಡ ನಗರ ಎಂದು ಹೇಳಲಾಗುತ್ತೆ ಇನ್ನು ಇಲ್ಲಿ ಎಲ್ಲ ಮೂಲಸೌಕರ್ಯಗಳಿವೆ ಎಂದರು. ಇನ್ನು ಒಂದಷ್ಟು ಠೇವಣಿ ಇಟ್ಟರೆ ವೈಜಾಗ್, ಹೈದರಾಬಾದ್ ದೊಡ್ಡ ನಗರಗಳಿಗೆ ಪೈಪೋಟಿ ನೀಡುವ ಸ್ಥಿತಿ ನಿರ್ಮಾಣವಾಗಲಿದೆ. ವಾಸ್ತವವನ್ನ ಅರಿತು 3 ರಾಜಧಾನಿಗಳು ಎಲ್ಲಾ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಮಸೂದೆ ತಂದಿವೆ ಎಂದು ಜಗನ್ ಹೇಳಿದರು.
ಇನ್ನು ಅಮರಾವತಿಯಲ್ಲಿ ಕನಿಷ್ಠ ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆ ಕಲ್ಪಿಸಲು 1 ಲಕ್ಷ ಕೋಟಿ ವೆಚ್ಚವಾಗಲಿದೆ ಎಂದು ಹಿಂದಿನ ಸರಕಾರ ಹೇಳಿತ್ತು. ಇಂದು ರೂ.1 ಲಕ್ಷ ಕೋಟಿ ವೆಚ್ಚ ರೂ. 7ಲಕ್ಷ ಕೋಟಿ. ರಾಜ್ಯಕ್ಕೆ ಕನಿಷ್ಠ ಸೌಲಭ್ಯ ಕಲ್ಪಿಸಲು ಕೂಡ ಹಣವಿಲ್ಲದಿದ್ದರೆ ರಾಜಧಾನಿ ಕಟ್ಟಲು ಸಾಧ್ಯವೇ ಎಂದು ಜಗನ್ ನೇರವಾಗಿ ಪ್ರಶ್ನಿಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…