ಆಂಧ್ರ ಪ್ರದೇಶ:ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯ ಗ್ರಾಮವೊಂದರಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ವಿಷವಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೀದಿ ನಾಯಿಗಳ ಕಾಟ ಹೆಚ್ಚಾಗಿರುವ ಆಗಿರುವ ಕಾರಣದಿಂದ ಲಿಂಗಪಾಲೆಂ ಗ್ರಾಮದಲ್ಲಿ ಅವಮಾನಿಯ ಘಟನೆ
ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿತ್ತು. ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ದೂರು ನೀಡಿದ್ದರು. ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪಂಚಾಯತ್ ಸಿಬ್ಬಂದಿ ಬೀದಿ ನಾಯಿಗೆ ವಿಷವುಣಿಸಿ ಕೊಂದಿದ್ದಾರೆ.ನಾಯಿಗಳನ್ನು ಕೊಂದ ಬಳಿಕ ಹೊಂಡದಲ್ಲಿ ಹೂತು ಹಾಕಿದ್ದಾರೆ ಎಂದು ಪ್ರಾಣಿ ದಯಾ ಸಂಘದ ಲಲಿತಾ ಆರೋಪಿಸಿದ್ದಾರೆ. ಈ ಕುರಿತು ಅವರು ಧರ್ಮಾಜಿಗೂಡೆಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಸಿಬ್ಬಂದಿಗಳ ವಿರುದ್ಧ ದೂರು ದಾಖಲಾಗಿದೆ.’ನಾನು ಗ್ರಾಮಕ್ಕೆ ಭೇಟಿ ನೀಡಿದಾಗ 300ಕ್ಕೂ ಹೆಚ್ಚು ಬೀದಿ ನಾಯಿಗಳ ಕಳೇಬರ ಹೂಳಲಾಗಿದೆ ಎಂಬ ಮಾಹಿತಿ ತಿಳಿಯಿತು. ನಾನು ಇದರ ಹಿಂದೆ ಬಿದ್ದು ತನಿಖೆ ಮಾಡಿದಾಗ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರು ಕೆಲವು ವ್ಯಕ್ತಿಗಳ ಜತೆ ಕೈ ಜೋಡಿಸಿ ನಾಯಿಗಳನ್ನು ಕೊಂದಿದ್ದಾರೆ ಎಂದು ತಿಳಿದುಬಂದಿತು’ ಎಂದು ಲಲಿತಾ ಹೇಳಿದ್ದಾರೆ.
ಲಿಂಗಪಾಲೆಂ ಗ್ರಾಮದಲ್ಲಿ ಬೀದಿನಾಯಿಗಳ ಮಾರಣಹೋಮ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.