News Karnataka Kannada
Monday, April 29 2024
ಆಂಧ್ರಪ್ರದೇಶ

ವಿವಾಹವಾದ 3ನೇ ದಿನಕ್ಕೆ ವಧು ಅಪಘಾತದಲ್ಲಿ ಸಾವು

Accident Kalburgy 20072021
Photo Credit :

ಹೈದರಾಬಾದ್​, ;ಮದುವೆಯಾದ ಮೂರೇ ದಿನದಲ್ಲಿ ನವವಿವಾಹಿತೆ ಹಾಗೂ ಆಕೆಯ ತಂದೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ನಿರ್ಮಲ ಜಿಲ್ಲೆಯ ಮಾದಿಪದಗದಲ್ಲಿ ದುರ್ಘಟನೆ ನಡೆದಿದೆ.
ಮೌನಿಕಾ (25), ತಂದೆ ರಾಜಯ್ಯ (50) ಮೃತದುರ್ದೈವಿಗಳು. ನಿರ್ಮಲ ಜಿಲ್ಲೆಯ ಕೊಡೆಮ್​ ವಲಯದ ಪಾಂಡವಪುರ್​ ಬಳಿ ಕಣಿವೆಯೊಂದಕ್ಕೆ ಕಾರು ಉರುಳಿ ಬಿದ್ದು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಬಲಹರ್ಷಾದಲ್ಲಿರುವ ವರನ ಮನೆಯಲ್ಲಿ ಆರತಕ್ಷತೆ​ ಮುಗಿಸಿಕೊಂಡು ಹಿಂದಿರುಗುವಾಗ ಅವಘಡ ಸಂಭವಿಸಿದೆ.
ಕಳೆದ ಆಗಸ್ಟ್​ 25ರಂದು ಮಹಾರಾಷ್ಟ್ರದ ಬಲಹರ್ಷಾ ಮೂಲದ ವರ ಜನಾರ್ದನ್ ಜತೆ ಮೌನಿಕಾ ಮದುವೆ ನಡೆದಿತ್ತು. ಸಾವಿನಿಂದ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ವರ ಜನಾರ್ದನ್​ ಕೂಡ ಅದೇ ಕಾರಿನಲ್ಲಿದ್ದರು. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೌನಿಕಾ ಹಾಗೂ ರಾಜಯ್ಯ ಅಗಲಿಕೆಯಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು