News Karnataka Kannada
Saturday, May 04 2024
ಬಾಗಲಕೋಟೆ

ಶ್ರೀಶೈಲದಲ್ಲಿ ತಡರಾತ್ರಿ ಉದ್ವಿಗ್ನ ವಾತಾವರಣ : ಕರ್ನಾಟಕದ ಹಲವು ವಾಹನಗಳು ಜಖಂ!

144 Section
Photo Credit : News Kannada

ಬಾಗಲಕೋಟೆ: ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಬುಧವಾರ ರಾತ್ರಿ ಕುಡಿವ ನೀರಿನ ಬಾಟಲಿ ವಿಚಾರಕ್ಕೆ ಉಂಟಾದ ಜಗಳದಲ್ಲಿ ಆಂಧ್ರ ಮೂಲದ‌ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ.

ಕರ್ನಾಟಕ ಮೂಲ‌ದ ಅಂದಾಜು 200ಕ್ಕೂ ಹೆಚ್ಚು ವಾಹನಗಳ ಗ್ಲಾಸ್​ಗಳು ಜಖಂ ಆಗಿವೆ.

ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಾಗಲಕೋಟೆ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಕೆಲವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಗಲಾಟೆಯಲ್ಲಿ ಬಾಗಲಕೋಟೆ ಜಿಲ್ಲೆ ಜಾನಮಟ್ಟಿ ಗ್ರಾಮದ ಯುವಕ ಶ್ರೀಶೈಲ ವಾರಿಮಠ(28) ಮೃತಪಟ್ಟಿದ್ದಾನೆ.

ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶ್ರೀಶೈಲ ಪೀಠಾಧಿಪತಿ ಶ್ರೀ ಚೆನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು