ವಿಜಯವಾಡ: ಹೆತ್ತ ತಾಯಿಯೇ ತನ್ನ ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯವಾಡದಲ್ಲಿ ನಡೆದಿದೆ.
ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.ಮೃತ ವ್ಯಕ್ತಿ ಕುಡಿದ ಅಮಲಿನಲ್ಲಿ ತನ್ನ ತಾಯಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಮೃತ ಅಪ್ಪಲ ಬಾಲ ಕೋಟಯ್ಯ (35) ಟ್ರಕ್ ಚಾಲಕನಾಗಿದ್ದು, ಆರು ವರ್ಷಗಳ ಹಿಂದೆ ಕಂಚಿಕಚೆರ್ಲಾದ ಸಿರಿಶಾ ಅವರನ್ನು ಮದುವೆಯಾಗಿದ್ದರು. ಇತ್ತೀಚೆಗೆ ಅವರು ವಿಚ್ಛೇದನ ಪಡೆದಿದ್ದರು ಎಂದು ವರದಿ ಮಾಡಿದೆ. ಪೊಲೀಸರ ಪ್ರಕಾರ, ಭಾನುವಾರ ರಾಮನವಮಿ ಆಚರಿಸಲು ಚಿಟ್ಟೆಮ್ಮ ತನ್ನ ಮೊಮ್ಮಕ್ಕಳನ್ನು ಆಹ್ವಾನಿಸಿದ್ದರು.
ಮಗನ ಅಟ್ಟಹಾಸವನ್ನು ನಿಯಂತ್ರಿಸಲು ಸಾಧ್ಯವಾಗದೆ, ತನ್ನ ಹಾಗೂ ಮೊಮ್ಮಕ್ಕಳ ಪ್ರಾಣ ಉಳಿಸಿಕೊಳ್ಳಲು ಆಕೆ ಮಗನಿಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾಳೆ. ತೀವ್ರವಾದ ಹೊಡೆತದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕೊಲೆಯ ಆರೋಪದಲ್ಲಿ ಚಿಟ್ಟೆಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.